ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…