ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ಆರಂಭಗೊಂಡಿದೆ.ಕಾರ್ಯಕ್ರಮವನ್ನು ನ ಪಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಕೇಕಡ್ಕ, ಕಾಯರ್ತೋಡಿಯ ಪ್ರಶಾಂತ ಆಚಾರ್ಯ. ನಾರಾಯಣ ಆಚಾರ್ಯ , ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ್ ಅಜ್ಜಾವರ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಸೋಂತೋಡು, ಮಹೇಶ್ ಸಾಲ್ತಾಡಿ , ಜಯಪ್ರಕಾಶ್, ರಕ್ಷಿತ್ ಮೊದಲಾದವರು ಇದ್ದರು.
ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪ್ಪಳ್ಳ ಸ್ವಾಗತಿಸಿ ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದವರು.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…