ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ಆರಂಭಗೊಂಡಿದೆ.ಕಾರ್ಯಕ್ರಮವನ್ನು ನ ಪಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಕೇಕಡ್ಕ, ಕಾಯರ್ತೋಡಿಯ ಪ್ರಶಾಂತ ಆಚಾರ್ಯ. ನಾರಾಯಣ ಆಚಾರ್ಯ , ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ್ ಅಜ್ಜಾವರ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಸೋಂತೋಡು, ಮಹೇಶ್ ಸಾಲ್ತಾಡಿ , ಜಯಪ್ರಕಾಶ್, ರಕ್ಷಿತ್ ಮೊದಲಾದವರು ಇದ್ದರು.
ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪ್ಪಳ್ಳ ಸ್ವಾಗತಿಸಿ ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದವರು.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…