ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಂಡು ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಿದ್ದು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ನೆರವೇರಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸಿದ್ದಾರೆ.
ಸಂಘದ ಖಜಾಂಜಿ ಮಹೇಶ್ ಸಾಲ್ತಾಡಿ ಸ್ವಾಗತಿಸಿ ಸಂಘದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…