ವಿಶೇಷ ವರದಿಗಳು

ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕೃ.ಶಾ.ಮರ್ಕಂಜ

Share

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ ಸಾಹಿತಿ ಕೃ.ಶಾ.ಮರ್ಕಂಜ (ಕೃಷ್ಣಶಾಸ್ತ್ರಿ ಮರ್ಕಂಜ) ಆಯ್ಕೆಯಾಗಿದ್ದಾರೆ.

Advertisement

ಸಾಹಿತ್ಯ ಪರಿಷತ್ ಮತ್ತು ಸಂಘಟನಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರಾಗಿ ಕೃ.ಶಾ.ಮರ್ಕಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸುಳ್ಯ ನ್ಯೂಸ್.ಕಾಂಗೆ ತಿಳಿಸಿದ್ದಾರೆ.

ಕೃ.ಶಾ.ಮರ್ಕಂಜ ಪರಿಚಯ: ಬಂಟ್ವಾಳ ತಾಲೂಕು ಕೇಪು ಗ್ರಾಮದ ಕೋಡಂದೂರು ಎಂಬಲ್ಲಿ ಮೇ 22, 1963 ರಲ್ಲಿ ಜನಿಸಿದರು. ಅಮೈ, ಅಡ್ಯನಡ್ಕ, ಪುತ್ತೂರುಗಳಲ್ಲಿ ವಿದ್ಯಾಭ್ಯಾಸ ಪಡೆದರು. 1983 ರಿಂದ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೋಳ ಎಂಬಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಕೃಷಿಕನಾಗಿ ವಾಸ್ತವ್ಯ. ಪ್ರೌಢಶಾಲೆಯ ದಿನಗಳಲ್ಲಿ ಅಧ್ಯಾಪಕರೂ ಖ್ಯಾತ ಸಾಹಿತಿಗಳೂ ಆಗಿದ್ದ ವಿ . ಗ . ನಾಯಕ ಹಾಗೂ ಶ್ರೀಕೃಷ್ಣ ಚೆನ್ನಂಗೋಡು ಇವರಿಂದ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ. 1983ರಲ್ಲಿ ‘ಮೌನ ಪಿಟಕ ‘ಕವನ ಸಂಕಲನ ಪ್ರಕಟ.

Advertisement

ನವ್ಯ, ಬಂಡಾಯ, ದಲಿತ ಸಾಹಿತ್ಯದ ಕಾಲಘಟ್ಟದಲ್ಲಿ ಅದಕ್ಕಿಂತ ಭಿನ್ನ ಕಳಕಳಿಯ ಸಮನ್ವಯದ ನೆಲೆಯೊಂದರ ಹುಡುಕಾಟದ ಪ್ರಯತ್ನವೊಂದನ್ನು ಈ ಸಂಕಲನದಲ್ಲಿ ಗುರುತಿಸಬಹುದು. ಹಾಗೆಯೇ ಪತ್ರಿಕೆಗಳಲ್ಲಿ, ಸ್ಮರಣ ಸಂಚಿಕೆ – ಆಕರ ಗ್ರಂಥ, ಅಭಿನಂದನ ಗ್ರಂಥಗಳಲ್ಲಿ ಅನೇಕ ವಿಮರ್ಶ ಲೇಖನಗಳು, ಲಲಿತ ಪ್ರಬಂಧಗಳು, ಲಘು ಬರಹಗಳು, ಸಮೀಕ್ಷಾ ಪ್ರಬಂಧಗಳು, ಕವಿತೆ – ವೈಚಾರಿಕ ಲೇಖನಗಳು ಪ್ರಕಟವಾಗಿವೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹಲವೆಡೆ ಅನೇಕ ಸಭೆ – ಸಮಾರಂಭ, ಸಾಹಿತ್ಯ ಸಮ್ಮೇಳನಗಳಲ್ಲಿ ವಿವಿಧ ಗೋಷ್ಠಿಗಳ ಅಧ್ಯಕ್ಷತೆ, ಪ್ರಬಂಧ ಮಂಡನೆ, ಉಪನ್ಯಾಸ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಭಾಷಾಧ್ಯಯನ, ವಿಚಾರ ಸಾಹಿತ್ಯಗಳಲ್ಲಿ ವಿಶೇಷ ಒಲವು. ಸುಳ್ಯ ತಾಲೂಕು 21 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿತರಾಗಿದ್ದರು. ಇದೀಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಒಲಿದು ಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

9 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

16 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

16 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

16 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

16 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago