Advertisement
ವಿಶೇಷ ವರದಿಗಳು

ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕೃ.ಶಾ.ಮರ್ಕಂಜ

Share

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ ಸಾಹಿತಿ ಕೃ.ಶಾ.ಮರ್ಕಂಜ (ಕೃಷ್ಣಶಾಸ್ತ್ರಿ ಮರ್ಕಂಜ) ಆಯ್ಕೆಯಾಗಿದ್ದಾರೆ.

ಸಾಹಿತ್ಯ ಪರಿಷತ್ ಮತ್ತು ಸಂಘಟನಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರಾಗಿ ಕೃ.ಶಾ.ಮರ್ಕಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸುಳ್ಯ ನ್ಯೂಸ್.ಕಾಂಗೆ ತಿಳಿಸಿದ್ದಾರೆ.

ಕೃ.ಶಾ.ಮರ್ಕಂಜ ಪರಿಚಯ: ಬಂಟ್ವಾಳ ತಾಲೂಕು ಕೇಪು ಗ್ರಾಮದ ಕೋಡಂದೂರು ಎಂಬಲ್ಲಿ ಮೇ 22, 1963 ರಲ್ಲಿ ಜನಿಸಿದರು. ಅಮೈ, ಅಡ್ಯನಡ್ಕ, ಪುತ್ತೂರುಗಳಲ್ಲಿ ವಿದ್ಯಾಭ್ಯಾಸ ಪಡೆದರು. 1983 ರಿಂದ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೋಳ ಎಂಬಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಕೃಷಿಕನಾಗಿ ವಾಸ್ತವ್ಯ. ಪ್ರೌಢಶಾಲೆಯ ದಿನಗಳಲ್ಲಿ ಅಧ್ಯಾಪಕರೂ ಖ್ಯಾತ ಸಾಹಿತಿಗಳೂ ಆಗಿದ್ದ ವಿ . ಗ . ನಾಯಕ ಹಾಗೂ ಶ್ರೀಕೃಷ್ಣ ಚೆನ್ನಂಗೋಡು ಇವರಿಂದ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ. 1983ರಲ್ಲಿ ‘ಮೌನ ಪಿಟಕ ‘ಕವನ ಸಂಕಲನ ಪ್ರಕಟ.

ನವ್ಯ, ಬಂಡಾಯ, ದಲಿತ ಸಾಹಿತ್ಯದ ಕಾಲಘಟ್ಟದಲ್ಲಿ ಅದಕ್ಕಿಂತ ಭಿನ್ನ ಕಳಕಳಿಯ ಸಮನ್ವಯದ ನೆಲೆಯೊಂದರ ಹುಡುಕಾಟದ ಪ್ರಯತ್ನವೊಂದನ್ನು ಈ ಸಂಕಲನದಲ್ಲಿ ಗುರುತಿಸಬಹುದು. ಹಾಗೆಯೇ ಪತ್ರಿಕೆಗಳಲ್ಲಿ, ಸ್ಮರಣ ಸಂಚಿಕೆ – ಆಕರ ಗ್ರಂಥ, ಅಭಿನಂದನ ಗ್ರಂಥಗಳಲ್ಲಿ ಅನೇಕ ವಿಮರ್ಶ ಲೇಖನಗಳು, ಲಲಿತ ಪ್ರಬಂಧಗಳು, ಲಘು ಬರಹಗಳು, ಸಮೀಕ್ಷಾ ಪ್ರಬಂಧಗಳು, ಕವಿತೆ – ವೈಚಾರಿಕ ಲೇಖನಗಳು ಪ್ರಕಟವಾಗಿವೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹಲವೆಡೆ ಅನೇಕ ಸಭೆ – ಸಮಾರಂಭ, ಸಾಹಿತ್ಯ ಸಮ್ಮೇಳನಗಳಲ್ಲಿ ವಿವಿಧ ಗೋಷ್ಠಿಗಳ ಅಧ್ಯಕ್ಷತೆ, ಪ್ರಬಂಧ ಮಂಡನೆ, ಉಪನ್ಯಾಸ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಭಾಷಾಧ್ಯಯನ, ವಿಚಾರ ಸಾಹಿತ್ಯಗಳಲ್ಲಿ ವಿಶೇಷ ಒಲವು. ಸುಳ್ಯ ತಾಲೂಕು 21 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿತರಾಗಿದ್ದರು. ಇದೀಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಒಲಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

11 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

12 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

21 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago