ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ೨೦೧೯ಕ್ಕೆ ವೈಭವದ ಚಾಲನೆ ದೊರೆತಿದೆ. ಜ್ಯೋತಿ ವೃತ್ತದಿಂದ ಶ್ರೀ ಶಾರದಾ ದೇವಿ ಮೂರ್ತಿಯ ಪ್ರತಿಷ್ಠಾ ಮೆರವಣಿಗೆ ಸುಳ್ಯ ನಗರದಲ್ಲಿ ನಡೆದು, ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರಿ ಶಾರದಾಂಬಾ ಮಂಟಪದಲ್ಲಿ ದೇವಿಯ ಪ್ರತಿಷ್ಠಾಪನೆ ನಡೆಯಿತು. ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಶಾಸಕ ಎಸ್.ಅಂಗಾರ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್, ಉಪಾಧ್ಯಕ್ಷರಾದ ಚಿದಾನಂದ ವಿದ್ಯಾನಗರ, ರವಿಚಂದ್ರ ಕೊಡಿಯಾಲಬೈಲು, ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ರಾಜು ಪಂಡಿತ್, ಶಾರದಾಂಬಾ ಸೇವಾ ಟ್ರಸ್ಟ್ ನ ಅಧ್ಯಕ್ಷ ನವೀನ್ ಚಂದ್ರ ಬೆಂಗಳೂರು, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶಿಲಾವತಿ, ಬುದ್ಧ ನಾಯ್ಕ, ಕಿಶೋರಿ ಶೇಟ್, ಸರೋಜಿನಿ ಪೆಲ್ತಡ್ಕ, ಬಾಲಕೃಷ್ಣ ರೈ, ಪ್ರವಿತಾ ಪ್ರಶಾಂತ್, ಶೀಲಾ ಅರುಣ ಕುರುಂಜಿ, ಶಿಲ್ಪಾ ಸುದೇವ್, ಸುಶೀಲಾ ಜಿನ್ನಪ್ಪ, ನಾರಾಯಣ, ವಾಣಿಶ್ರೀ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ದಿನೇಶ್ ಅಂಬೆಕಲ್ಲು, ಕಮಲಾಕ್ಷಿ ಟೀಚರ್ ಮತ್ತಿತರರು ಉಪಸ್ಥಿತರಿದ್ದರು.
ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ಏಳಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬಳಿಕ ವಿದ್ಯಾಶ್ರೀ ರಾಧಾಕೃಷ್ಣ ಇವರ ನಿರ್ದೇಶನದಲ್ಲಿ ಗಾನನೃತ್ಯ ಅಕಾಡೆಮಿ ಮಂಗಳೂರು ಇವರಿಂದ ನೃತ್ಯ ಸಂಗಮ ಮತ್ತು ನೃತ್ಯ ರೂಪಕ ನಡೆಯುವುದು.
ಒಂಭತ್ತು ದಿನಗಳ ಕಾಲ ನಡೆಯುವ ವೈಭವದ ದಸರಾ ಉತ್ಸವ 13ರಂದು ಸಮಾಪನಗೊಳ್ಳಲಿದೆ.
ಅ.೬ರಂದು ಸುಳ್ಯದ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇವರ ಸಹಯೋಗದಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯುವುದು.
ಅ.೭ರಂದು ಬೆಳಗ್ಗೆ ಆಯುಧ ಪೂಜೆ, ಅ.ಎಂಟರಂದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ.ಅ.11 ರಂದು ಶ್ರೀ ಮಹಾ ಗಣಪತಿ ಗವನ, ಶ್ರೀ ಚಂಡಿಕಾ ಯಾಗ ನಡೆಯಲಿದೆ.
ಅ.೧೩ರಂದಯ ನಡೆಯಲಿದ್ದು ಅಂದು ಅದ್ದೂರಿ ಶೋಭಾ ಯಾತ್ರೆಯೊಂದಿಗೆ ದಸರಾ ಸಮಾಪನಗೊಳ್ಳಲಿದೆ. ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…