Advertisement
ಸುದ್ದಿಗಳು

ಸುಳ್ಯ ದಸರಾಕ್ಕೆ ವೈಭವದ ಚಾಲನೆ

Share

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ೨೦೧೯ಕ್ಕೆ ವೈಭವದ ಚಾಲನೆ ದೊರೆತಿದೆ. ಜ್ಯೋತಿ ವೃತ್ತದಿಂದ ಶ್ರೀ ಶಾರದಾ ದೇವಿ ಮೂರ್ತಿಯ ಪ್ರತಿಷ್ಠಾ ಮೆರವಣಿಗೆ ಸುಳ್ಯ ನಗರದಲ್ಲಿ ನಡೆದು, ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರಿ ಶಾರದಾಂಬಾ ಮಂಟಪದಲ್ಲಿ ದೇವಿಯ ಪ್ರತಿಷ್ಠಾಪನೆ ನಡೆಯಿತು. ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಪ್ರತಿಷ್ಠಾಪನೆ ನೆರವೇರಿಸಲಾಯಿತು.

 

ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಶಾಸಕ ಎಸ್‌.ಅಂಗಾರ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್, ಉಪಾಧ್ಯಕ್ಷರಾದ ಚಿದಾನಂದ ವಿದ್ಯಾನಗರ, ರವಿಚಂದ್ರ ಕೊಡಿಯಾಲಬೈಲು, ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ರಾಜು ಪಂಡಿತ್, ಶಾರದಾಂಬಾ ಸೇವಾ ಟ್ರಸ್ಟ್ ನ ಅಧ್ಯಕ್ಷ ನವೀನ್ ಚಂದ್ರ ಬೆಂಗಳೂರು, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶಿಲಾವತಿ, ಬುದ್ಧ ನಾಯ್ಕ, ಕಿಶೋರಿ ಶೇಟ್, ಸರೋಜಿನಿ ಪೆಲ್ತಡ್ಕ, ಬಾಲಕೃಷ್ಣ ರೈ, ಪ್ರವಿತಾ ಪ್ರಶಾಂತ್, ಶೀಲಾ ಅರುಣ ಕುರುಂಜಿ, ಶಿಲ್ಪಾ ಸುದೇವ್, ಸುಶೀಲಾ ಜಿನ್ನಪ್ಪ, ನಾರಾಯಣ, ವಾಣಿಶ್ರೀ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ದಿನೇಶ್ ಅಂಬೆಕಲ್ಲು, ಕಮಲಾಕ್ಷಿ ಟೀಚರ್ ಮತ್ತಿತರರು ಉಪಸ್ಥಿತರಿದ್ದರು.

ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ಏಳಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬಳಿಕ ವಿದ್ಯಾಶ್ರೀ ರಾಧಾಕೃಷ್ಣ ಇವರ ನಿರ್ದೇಶನದಲ್ಲಿ ಗಾನನೃತ್ಯ ಅಕಾಡೆಮಿ ಮಂಗಳೂರು ಇವರಿಂದ ನೃತ್ಯ ಸಂಗಮ ಮತ್ತು ನೃತ್ಯ ರೂಪಕ ನಡೆಯುವುದು.

 

ಒಂಭತ್ತು ದಿನಗಳ ಕಾಲ ನಡೆಯುವ ವೈಭವದ ದಸರಾ ಉತ್ಸವ 13ರಂದು ಸಮಾಪನಗೊಳ್ಳಲಿದೆ.

ಅ.೬ರಂದು ಸುಳ್ಯದ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇವರ ಸಹಯೋಗದಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯುವುದು.
ಅ.೭ರಂದು ಬೆಳಗ್ಗೆ ಆಯುಧ ಪೂಜೆ, ಅ.ಎಂಟರಂದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ.ಅ.11 ರಂದು ಶ್ರೀ ಮಹಾ ಗಣಪತಿ ಗವನ, ಶ್ರೀ ಚಂಡಿಕಾ ಯಾಗ ನಡೆಯಲಿದೆ.
ಅ.೧೩ರಂದಯ ನಡೆಯಲಿದ್ದು ಅಂದು ಅದ್ದೂರಿ ಶೋಭಾ ಯಾತ್ರೆಯೊಂದಿಗೆ ದಸರಾ ಸಮಾಪನಗೊಳ್ಳಲಿದೆ. ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

43 minutes ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

1 hour ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

12 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

12 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

17 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

18 hours ago