Advertisement
ಸುದ್ದಿಗಳು

ಸುಳ್ಯ ನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ- 52 ಪ್ರಕರಣ ದಾಖಲು

Share

ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

8 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

9 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

9 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

11 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

16 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

23 hours ago