Advertisement
ಸುದ್ದಿಗಳು

ಸುಳ್ಯ ನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ- 52 ಪ್ರಕರಣ ದಾಖಲು

Share

ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

3 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

10 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

11 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

12 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

18 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

24 hours ago