Advertisement
ಸುದ್ದಿಗಳು

ಸುಳ್ಯ ನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ- 52 ಪ್ರಕರಣ ದಾಖಲು

Share

ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

7 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

14 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

14 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

14 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

14 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

14 hours ago