Advertisement
ಸುದ್ದಿಗಳು

ಸುಳ್ಯ ನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ- 52 ಪ್ರಕರಣ ದಾಖಲು

Share

ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

9 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago