ಸುಳ್ಯ:ಸುಳ್ಯ ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ಪ್ರಮುಖರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಪಂಚಾಯತ್ ನ ಎಲ್ಲಾ 20 ವಾರ್ಡ್ ಗಳನ್ನೂ ಗೆಲ್ಲುವ ದೃಷ್ಟಿಯಿಂದ ನಗರದ ಎಲ್ಲಾ ಸಮಸ್ಯೆಗಳನ್ನೂ, ಬೇಡಿಕೆಗಳನ್ನೂ ಸೇರ್ಪಡೆ ಮಾಡಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದರೆ ಅದರ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದರು. ಶಾಶ್ವತ ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಸಮರ್ಪಕ ಯೋಜನೆ ಸೇರಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಾರಿ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಹೊಸ ಹುರುಪಿನೊಂದಿಗೆ ನಗರದ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ನೆಲೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಂಡಲ ಉಪಾಧ್ಯಕ್ಷ ವಿನಯಕುಮಾರ್ ಮುಳುಗಾಡು, ಪ್ರಮುಖರಾದ ಪಿ.ಕೆ.ಉಮೇಶ್, ಶೀನಪ್ಪ ಬಯಂಬು, ಸೋಮನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…