ಸುಳ್ಯ:ಸುಳ್ಯ ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ಪ್ರಮುಖರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಪಂಚಾಯತ್ ನ ಎಲ್ಲಾ 20 ವಾರ್ಡ್ ಗಳನ್ನೂ ಗೆಲ್ಲುವ ದೃಷ್ಟಿಯಿಂದ ನಗರದ ಎಲ್ಲಾ ಸಮಸ್ಯೆಗಳನ್ನೂ, ಬೇಡಿಕೆಗಳನ್ನೂ ಸೇರ್ಪಡೆ ಮಾಡಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದರೆ ಅದರ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದರು. ಶಾಶ್ವತ ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಸಮರ್ಪಕ ಯೋಜನೆ ಸೇರಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಾರಿ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಹೊಸ ಹುರುಪಿನೊಂದಿಗೆ ನಗರದ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ನೆಲೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಂಡಲ ಉಪಾಧ್ಯಕ್ಷ ವಿನಯಕುಮಾರ್ ಮುಳುಗಾಡು, ಪ್ರಮುಖರಾದ ಪಿ.ಕೆ.ಉಮೇಶ್, ಶೀನಪ್ಪ ಬಯಂಬು, ಸೋಮನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…