ಸುಳ್ಯ: ಸುಳ್ಯ ನಗರದಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಗಮನ ಹರಿಸಬೇಕು ಎಂದು ಆಗ್ರಹಿಸಿ ಸುಳ್ಯ ನಗರ ಬಿಜೆಪಿ ಮತ್ತು ನಗರ ಪಂಚಾಯತ್ ಬಿಜೆಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಸಚಿವರನ್ನು ಭೇಟಿಯಾದ ಬಿಜೆಪಿ ಪ್ರಮುಖರು ಮನವಿ ಸಲ್ಲಿಸಿದರು.
ಕಸ ವಿಲೇವಾರಿ ಅವ್ಯವಸ್ಥೆ: ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕಸ ವಿಲೇವಾರಿಗೆ ಸ್ಥಳ ಗುರುತಿಸಿ, ಕಸ ವಿಲೇವಾರಿ ಮಾಡದ ಕಾರಣ ನಗರದಲ್ಲಿ ತ್ಯಾಜ್ಯ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತು ತುರ್ತು ಗಮನ ಹರಿಸಬೇಕು.
ಒಳಚರಂಡಿ ಯೋಜನೆ: ಒಳಚರಂಡಿ ಯೋಜನೆ ಅನುಷ್ಠಾನಗೊಂಡು 15 ವರ್ಷ ಕಳೆದರೂ ಅಸಮರ್ಪಕ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಒಳಚರಂಡಿ ಸಂಪರ್ಕ ಸಾಧ್ಯವಾಗಿಲ್ಲ.
ಕುಡಿಯುವ ನೀರಿನ ವ್ಯವಸ್ಥೆ: 30 ವರ್ಷಗಳ ಹಿಂದಿನ ಕುಡಿಯುವ ನೀರಿನ ಘಟಕ ವ್ಯವಸ್ಥೆ ಇದೆ. ಬೇಸಿಗೆಯಲ್ಲಿ ತಾತ್ಕಾಲಿಕ ಒಡ್ಡು ನಿರ್ಮಿಸಿ ನೀರು ಸರಬರಾಜು ಮಾಡಲಾಗುತ್ತದೆ. ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 64 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾತಿ ದೊರೆತಿಲ್ಲ. ಕೂಡಲೇ ಮಂಜೂರಾತಿ ನೀಡಬೇಕು.
ನಮೂನೆ 3ನ್ನು ನೀಡುವಾಗ ಇರುವ ಗೊಂದಲ ಪರಿಹರಿಸಬೇಕು, ಬಿಪಿಎಲ್ ಪಡಿತರ ರದ್ದತಿಯ ದಂಡ ವಸೂಲಾತಿಯನ್ನು ರದ್ದು ಮಾಡಿ ಬಿಪಿಎಲ್ ಕಾರ್ಡ್ ಸ್ವಯಂ ರದ್ದತಿಗೆ ಕಾಲಾವಕಾಶ ನೀಡಬೇಕು, ನಗರ ಪಂಚಾಯತ್ ಚುನಾವಣೆ ನಡೆದು 5 ತಿಂಗಳಾದರೂ ಅಧಿಕಾರ ಹಸ್ತಾಂತರ ಆಗಿಲ್ಲ. ಅಧಿಕಾರ ಹಸ್ತಾಂತರ ಕೂಡಲೇ ಮಾಡಬೇಕು, ಸುಳ್ಯ ತಾಲೂಕಿಗೆ ಅತೀ ಅಗತ್ಯವಾದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಕೂಡಲೇ ಅನುಷ್ಠನ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಿಜೆಪಿ ನಗರಾಧ್ಯಕ್ಷ ವಿಜಯಕುಮಾರ್ ಕಂದಡ್ಕ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪಿ.ಕೆ.ಉಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ದಾಮೋದರ ಮಂಚಿ, ನಾರಾಯಣ ಶಾಂತಿನಗರ, ನ.ಪಂ.ಸದಸ್ಯರಾದ ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಪ್ರವಿತಾ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…