ಸುಳ್ಯ: ಸುಳ್ಯ ನಗರದಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಗಮನ ಹರಿಸಬೇಕು ಎಂದು ಆಗ್ರಹಿಸಿ ಸುಳ್ಯ ನಗರ ಬಿಜೆಪಿ ಮತ್ತು ನಗರ ಪಂಚಾಯತ್ ಬಿಜೆಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಸಚಿವರನ್ನು ಭೇಟಿಯಾದ ಬಿಜೆಪಿ ಪ್ರಮುಖರು ಮನವಿ ಸಲ್ಲಿಸಿದರು.
ಕಸ ವಿಲೇವಾರಿ ಅವ್ಯವಸ್ಥೆ: ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕಸ ವಿಲೇವಾರಿಗೆ ಸ್ಥಳ ಗುರುತಿಸಿ, ಕಸ ವಿಲೇವಾರಿ ಮಾಡದ ಕಾರಣ ನಗರದಲ್ಲಿ ತ್ಯಾಜ್ಯ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತು ತುರ್ತು ಗಮನ ಹರಿಸಬೇಕು.
ಒಳಚರಂಡಿ ಯೋಜನೆ: ಒಳಚರಂಡಿ ಯೋಜನೆ ಅನುಷ್ಠಾನಗೊಂಡು 15 ವರ್ಷ ಕಳೆದರೂ ಅಸಮರ್ಪಕ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಒಳಚರಂಡಿ ಸಂಪರ್ಕ ಸಾಧ್ಯವಾಗಿಲ್ಲ.
ಕುಡಿಯುವ ನೀರಿನ ವ್ಯವಸ್ಥೆ: 30 ವರ್ಷಗಳ ಹಿಂದಿನ ಕುಡಿಯುವ ನೀರಿನ ಘಟಕ ವ್ಯವಸ್ಥೆ ಇದೆ. ಬೇಸಿಗೆಯಲ್ಲಿ ತಾತ್ಕಾಲಿಕ ಒಡ್ಡು ನಿರ್ಮಿಸಿ ನೀರು ಸರಬರಾಜು ಮಾಡಲಾಗುತ್ತದೆ. ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 64 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾತಿ ದೊರೆತಿಲ್ಲ. ಕೂಡಲೇ ಮಂಜೂರಾತಿ ನೀಡಬೇಕು.
ನಮೂನೆ 3ನ್ನು ನೀಡುವಾಗ ಇರುವ ಗೊಂದಲ ಪರಿಹರಿಸಬೇಕು, ಬಿಪಿಎಲ್ ಪಡಿತರ ರದ್ದತಿಯ ದಂಡ ವಸೂಲಾತಿಯನ್ನು ರದ್ದು ಮಾಡಿ ಬಿಪಿಎಲ್ ಕಾರ್ಡ್ ಸ್ವಯಂ ರದ್ದತಿಗೆ ಕಾಲಾವಕಾಶ ನೀಡಬೇಕು, ನಗರ ಪಂಚಾಯತ್ ಚುನಾವಣೆ ನಡೆದು 5 ತಿಂಗಳಾದರೂ ಅಧಿಕಾರ ಹಸ್ತಾಂತರ ಆಗಿಲ್ಲ. ಅಧಿಕಾರ ಹಸ್ತಾಂತರ ಕೂಡಲೇ ಮಾಡಬೇಕು, ಸುಳ್ಯ ತಾಲೂಕಿಗೆ ಅತೀ ಅಗತ್ಯವಾದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಕೂಡಲೇ ಅನುಷ್ಠನ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಿಜೆಪಿ ನಗರಾಧ್ಯಕ್ಷ ವಿಜಯಕುಮಾರ್ ಕಂದಡ್ಕ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪಿ.ಕೆ.ಉಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ದಾಮೋದರ ಮಂಚಿ, ನಾರಾಯಣ ಶಾಂತಿನಗರ, ನ.ಪಂ.ಸದಸ್ಯರಾದ ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಪ್ರವಿತಾ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…