Advertisement
MIRROR FOCUS

ಸುಳ್ಯ ನಗರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಚಿವರಿಗೆ ಮನವಿ

Share

ಸುಳ್ಯ: ಸುಳ್ಯ ನಗರದಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಗಮನ ಹರಿಸಬೇಕು ಎಂದು ಆಗ್ರಹಿಸಿ ಸುಳ್ಯ ನಗರ ಬಿಜೆಪಿ ಮತ್ತು ನಗರ ಪಂಚಾಯತ್ ಬಿಜೆಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಸಚಿವರನ್ನು ಭೇಟಿಯಾದ ಬಿಜೆಪಿ ಪ್ರಮುಖರು ಮನವಿ ಸಲ್ಲಿಸಿದರು.

ಕಸ ವಿಲೇವಾರಿ ಅವ್ಯವಸ್ಥೆ: ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕಸ ವಿಲೇವಾರಿಗೆ ಸ್ಥಳ ಗುರುತಿಸಿ, ಕಸ ವಿಲೇವಾರಿ ಮಾಡದ ಕಾರಣ ನಗರದಲ್ಲಿ ತ್ಯಾಜ್ಯ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತು ತುರ್ತು ಗಮನ ಹರಿಸಬೇಕು.

ಒಳಚರಂಡಿ ಯೋಜನೆ: ಒಳಚರಂಡಿ ಯೋಜನೆ ಅನುಷ್ಠಾನಗೊಂಡು 15 ವರ್ಷ ಕಳೆದರೂ ಅಸಮರ್ಪಕ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಒಳಚರಂಡಿ ಸಂಪರ್ಕ ಸಾಧ್ಯವಾಗಿಲ್ಲ.

ಕುಡಿಯುವ ನೀರಿನ ವ್ಯವಸ್ಥೆ:  30 ವರ್ಷಗಳ ಹಿಂದಿನ ಕುಡಿಯುವ ನೀರಿನ ಘಟಕ ವ್ಯವಸ್ಥೆ ಇದೆ. ಬೇಸಿಗೆಯಲ್ಲಿ ತಾತ್ಕಾಲಿಕ ಒಡ್ಡು ನಿರ್ಮಿಸಿ ನೀರು ಸರಬರಾಜು ಮಾಡಲಾಗುತ್ತದೆ. ಸುಳ್ಯ ನಗರಕ್ಕೆ ‌ಶಾಶ್ವತ ಕುಡಿಯುವ ನೀರಿನ ಯೋಜನೆಗೆ 64 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾತಿ ದೊರೆತಿಲ್ಲ. ಕೂಡಲೇ ಮಂಜೂರಾತಿ ನೀಡಬೇಕು.

ನಮೂನೆ 3ನ್ನು ನೀಡುವಾಗ ಇರುವ ಗೊಂದಲ ಪರಿಹರಿಸಬೇಕು, ಬಿಪಿಎಲ್ ಪಡಿತರ ರದ್ದತಿಯ ದಂಡ ವಸೂಲಾತಿಯನ್ನು ರದ್ದು ಮಾಡಿ ಬಿಪಿಎಲ್ ಕಾರ್ಡ್ ಸ್ವಯಂ ರದ್ದತಿಗೆ ಕಾಲಾವಕಾಶ ನೀಡಬೇಕು, ನಗರ ಪಂಚಾಯತ್ ಚುನಾವಣೆ ನಡೆದು 5 ತಿಂಗಳಾದರೂ ಅಧಿಕಾರ ಹಸ್ತಾಂತರ ಆಗಿಲ್ಲ. ಅಧಿಕಾರ ಹಸ್ತಾಂತರ ಕೂಡಲೇ ಮಾಡಬೇಕು, ಸುಳ್ಯ ತಾಲೂಕಿಗೆ ಅತೀ ಅಗತ್ಯವಾದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಕೂಡಲೇ ಅನುಷ್ಠನ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಬಿಜೆಪಿ ನಗರಾಧ್ಯಕ್ಷ ವಿಜಯಕುಮಾರ್ ಕಂದಡ್ಕ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪಿ.ಕೆ.ಉಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ದಾಮೋದರ ಮಂಚಿ, ನಾರಾಯಣ ಶಾಂತಿನಗರ, ನ.ಪಂ.ಸದಸ್ಯರಾದ ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಪ್ರವಿತಾ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

3 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

4 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

5 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

11 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago