ಸುದ್ದಿಗಳು

ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಒತ್ತು : ಎಸ್.ಅಂಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಈ ಹಿಂದೆ ನಗರ ಪಂಚಾಯತನ್ನು ಆಡಳಿತ ನಡೆಸಿದ್ದ ಕಾಂಗ್ರೆಸ್ಸಿಗರು ಸಾರ್ವಜನಿಕ ಅಗತ್ಯತೆಗೆ ಭೂಮಿ ಕಾಯ್ದಿರಿಸುವ ಕೆಲಸ ಮಾಡಿಲ್ಲ. ಇದರಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಹಲವು ಅಭಿವೃದ್ಧಿಗೆ ಭೂಮಿಯ ಅಲಭ್ಯತೆಯ ಸಮಸ್ಯೆ ಎದುರಾಗಿದೆ. ಸೀಮಿತ ಭೂಮಿ ಲಭ್ಯತೆಯ ಮಧ್ಯೆಯೂ ಸಾಕಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು. ಮುಂದೆಯೂ ನಗರದ ಅಭಿವೃದ್ಧಿಗೆ ಬಿಜೆಪಿ ಆದ್ಯತೆ ನೀಡಲಿದೆ. ಕುಡಿಯುವ ನೀರು, ನಗರದ ಎಲ್ಲಾ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಆದ್ಯೆತೆ ನೀಡಲಾಗುವುದು ಎಂದರು. ಈ ಬಾರಿ ನಗರದ ಎಲ್ಲಾ 20 ವಾರ್ಡ್‍ಗಳಲ್ಲಿಯೂ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ. ಲೋಕಸಭಾ ಚುನಾವಣೆಯಲ್ಲಿನ ಬಿಜೆಪಿಯ ಗೆಲುವು ಮತ್ತು ಬಹುಮತ ನಿರೀಕ್ಷಿತ. ಲೋಕಸಭಾ ಚುನಾವಣೆಯ ಗೆಲುವು ನಗರ ಪಂಚಾಯಿತಿಯ ಗೆಲುವಿಗೆ ಪ್ರೇರಣೆಯಾಗಲಿದೆ ಎಂದು ಅಂಗಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ನಗರ ಬಿಜೆಪಿ ಅಧ್ಯಕ್ಷ ಹಾಗು ನ.ಪಂ.ಅಭ್ಯರ್ಥಿವಿನಯಕುಮಾರ್ ಕಂದಡ್ಕ, ಅಭ್ಯರ್ಥಿಗಳಾದ ಹರೀಶ್ ಬೂಡುಪನ್ನೆ, ಶಶಿಕಲಾ ಎ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್ ರೈ, ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಪ್ರಮುಖರಾದ ಪಿ.ಕೆ.ಉಮೇಶ್, ಸೋಮನಾಥ ಪೂಜಾರಿ, ಗಿರೀಶ್ ಕಲ್ಲುಗದ್ದೆ, ವೇದಾವತಿ ಮಾಣಿಬೆಟ್ಟು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

4 minutes ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

14 minutes ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

1 day ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago