ಸುಳ್ಯ ನಗರದ ಸಮಸ್ಯೆಗಳ ಅವಲೋಕನಕ್ಕೆ ಕಾಂಗ್ರೆಸ್ ತಂಡದಿಂದ ನಗರ ಪರ್ಯಟನೆ

May 6, 2019
1:34 PM

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಜ್ವಲಂತ ಸಮಸ್ಯೆಗಳ ಅವಲೋಕನ ನಡೆಸಲು ಕಾಂಗ್ರೆಸ್ ತಂಡ ನಗರ ಪರ್ಯಟನೆ ನಡೆಸಿದೆ.

Advertisement
Advertisement
Advertisement

ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ನೇತೃತ್ವದ ತಂಡ ಸೋಮವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳಚರಂಡಿ ಶುದ್ದೀಕರಣ ಘಟಕ, ಒಳಚರಂಡಿ ವೆಟ್ ವೆಲ್, ನಗರದ ಕೊಳಚೆ ನೀರು ಸೇರುವ ಕಂದಡ್ಕ ಹೊಳೆಯ ಪ್ರದೇಶ, ನಗರ ಪಂಚಾಯತ್ ನ ಕಲ್ಲುಮುಟ್ಲು ಪಂಪ್ ಹೌಸ್, ಕಲ್ಚರ್ಪೆಯ ತ್ಯಾಜ್ಯ ವಿಲೇವಾರಿ ಘಟಕ ಮತ್ತಿತರ ಕಡೆಗಳಿಗೆ ತಂಡ ಭೇಟಿ ನೀಡಿ ಅವಲೋಕನ ನಡೆಸಿತು.

Advertisement


ಕಳೆದ ಮೂರು ಚುನಾವಣೆಯ ಸಂದರ್ಭದಲ್ಲಿಯೂ ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯ ವಿಲೇವಾರಿ ಘಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ಆಡಳಿತ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಿಲ್ಲ. ಜ್ವಲಂತ ಸಮಸ್ಯೆಗಳು ಹಾಗೆಯೇ ಉಳಿದಿದೆ. ಇದೀಗ ನಗರ ಪಂಚಾಯತ್ ಚುನಾವಣೆ ಘೋಷಣೆ ಯಾಗಿರುವ ಹಿನ್ನಲೆಯಲ್ಲಿ ನಗರದ ಈ ಸಮಸ್ಯೆಗಳ ಅವಲೋಕನ ಮಾಡಿ ಸಮಸ್ಯೆಗಳನ್ನು ಜನರ ಮುಂದಿಡುವ ಉದ್ದೇಶದಿಂದ ನಗರ ಪರ್ಯಟನೆ ನಡೆಸುತ್ತಿದ್ದೇವೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು.

ನಗರ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಜೂಲಿಯಾ ಕ್ರಾಸ್ತಾ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಲಕ್ಷ್ಮಣ ಶೆಣೈ, ರಿಯಾಝ್ ಕಟ್ಟೆಕ್ಕರ್, ಧೀರಾ ಕ್ರಾಸ್ತಾ, ಶರೀಫ್ ಕಂಠಿ, ವಿಜಯ ಬಂಗ್ಲೆಗುಡ್ಡೆ, ಬಾಲಕೃಷ್ಣ ಬೀರಮಂಗಲ ಮತ್ತಿತರರು ತಂಡದಲ್ಲಿದ್ದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೆಡಿಎಸ್‌ ಅಭ್ಯರ್ಥಿ, ಬಿಜೆಪಿ ಚಿಹ್ನೆ….! |ಡಾ.ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದೇವೆ : ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು – ಹೆಚ್‌ ಡಿ ಕುಮಾರಸ್ವಾಮಿ
April 18, 2024
2:44 PM
by: The Rural Mirror ಸುದ್ದಿಜಾಲ
ದೇಶದ ಮೊದಲ ಹಾಗೂ ಗಟ್ಟಿ ಪಕ್ಷ ಕಾಂಗ್ರೆಸ್‌ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿರುವುದೇಕೆ…?
April 18, 2024
2:25 PM
by: The Rural Mirror ಸುದ್ದಿಜಾಲ
ಲೋಕಸಭಾ ಚುನಾವಣೆ | ಜಗತ್ತಿನ ಅತಿ ವೆಚ್ಚದಾಯಕ ಚುನಾವಣೆಗೆ ಒಟ್ಟು ಎಷ್ಟು ಖರ್ಚಾಗುತ್ತದೆ..? | ಖರ್ಚು- ವೆಚ್ಚ ಹೇಗೆ ನಡೆಯುತ್ತೆ? | ಚುನಾವಣಾ ಆಯೋಗ ವಶಪಡಿಸಿಕೊಂಡ ಅಕ್ರಮ ಹಣ, ವಸ್ತುಗಳೆಷ್ಟು..?
April 17, 2024
3:04 PM
by: The Rural Mirror ಸುದ್ದಿಜಾಲ
ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ
April 16, 2024
12:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror