Advertisement
ನಮ್ಮೂರ ಸುದ್ದಿ

ಸುಳ್ಯ ನಗರದ ಸಮಸ್ಯೆಗಳ ಅವಲೋಕನಕ್ಕೆ ಕಾಂಗ್ರೆಸ್ ತಂಡದಿಂದ ನಗರ ಪರ್ಯಟನೆ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಜ್ವಲಂತ ಸಮಸ್ಯೆಗಳ ಅವಲೋಕನ ನಡೆಸಲು ಕಾಂಗ್ರೆಸ್ ತಂಡ ನಗರ ಪರ್ಯಟನೆ ನಡೆಸಿದೆ.

Advertisement
Advertisement

ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ನೇತೃತ್ವದ ತಂಡ ಸೋಮವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳಚರಂಡಿ ಶುದ್ದೀಕರಣ ಘಟಕ, ಒಳಚರಂಡಿ ವೆಟ್ ವೆಲ್, ನಗರದ ಕೊಳಚೆ ನೀರು ಸೇರುವ ಕಂದಡ್ಕ ಹೊಳೆಯ ಪ್ರದೇಶ, ನಗರ ಪಂಚಾಯತ್ ನ ಕಲ್ಲುಮುಟ್ಲು ಪಂಪ್ ಹೌಸ್, ಕಲ್ಚರ್ಪೆಯ ತ್ಯಾಜ್ಯ ವಿಲೇವಾರಿ ಘಟಕ ಮತ್ತಿತರ ಕಡೆಗಳಿಗೆ ತಂಡ ಭೇಟಿ ನೀಡಿ ಅವಲೋಕನ ನಡೆಸಿತು.

Advertisement


ಕಳೆದ ಮೂರು ಚುನಾವಣೆಯ ಸಂದರ್ಭದಲ್ಲಿಯೂ ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯ ವಿಲೇವಾರಿ ಘಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ಆಡಳಿತ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಿಲ್ಲ. ಜ್ವಲಂತ ಸಮಸ್ಯೆಗಳು ಹಾಗೆಯೇ ಉಳಿದಿದೆ. ಇದೀಗ ನಗರ ಪಂಚಾಯತ್ ಚುನಾವಣೆ ಘೋಷಣೆ ಯಾಗಿರುವ ಹಿನ್ನಲೆಯಲ್ಲಿ ನಗರದ ಈ ಸಮಸ್ಯೆಗಳ ಅವಲೋಕನ ಮಾಡಿ ಸಮಸ್ಯೆಗಳನ್ನು ಜನರ ಮುಂದಿಡುವ ಉದ್ದೇಶದಿಂದ ನಗರ ಪರ್ಯಟನೆ ನಡೆಸುತ್ತಿದ್ದೇವೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು.

ನಗರ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಜೂಲಿಯಾ ಕ್ರಾಸ್ತಾ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಲಕ್ಷ್ಮಣ ಶೆಣೈ, ರಿಯಾಝ್ ಕಟ್ಟೆಕ್ಕರ್, ಧೀರಾ ಕ್ರಾಸ್ತಾ, ಶರೀಫ್ ಕಂಠಿ, ವಿಜಯ ಬಂಗ್ಲೆಗುಡ್ಡೆ, ಬಾಲಕೃಷ್ಣ ಬೀರಮಂಗಲ ಮತ್ತಿತರರು ತಂಡದಲ್ಲಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

5 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

10 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

10 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

10 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

10 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

10 hours ago