Advertisement
ನಮ್ಮೂರ ಸುದ್ದಿ

ಸುಳ್ಯ ನಗರದ ಸಮಸ್ಯೆಗಳ ಅವಲೋಕನಕ್ಕೆ ಕಾಂಗ್ರೆಸ್ ತಂಡದಿಂದ ನಗರ ಪರ್ಯಟನೆ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಜ್ವಲಂತ ಸಮಸ್ಯೆಗಳ ಅವಲೋಕನ ನಡೆಸಲು ಕಾಂಗ್ರೆಸ್ ತಂಡ ನಗರ ಪರ್ಯಟನೆ ನಡೆಸಿದೆ.

ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ನೇತೃತ್ವದ ತಂಡ ಸೋಮವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳಚರಂಡಿ ಶುದ್ದೀಕರಣ ಘಟಕ, ಒಳಚರಂಡಿ ವೆಟ್ ವೆಲ್, ನಗರದ ಕೊಳಚೆ ನೀರು ಸೇರುವ ಕಂದಡ್ಕ ಹೊಳೆಯ ಪ್ರದೇಶ, ನಗರ ಪಂಚಾಯತ್ ನ ಕಲ್ಲುಮುಟ್ಲು ಪಂಪ್ ಹೌಸ್, ಕಲ್ಚರ್ಪೆಯ ತ್ಯಾಜ್ಯ ವಿಲೇವಾರಿ ಘಟಕ ಮತ್ತಿತರ ಕಡೆಗಳಿಗೆ ತಂಡ ಭೇಟಿ ನೀಡಿ ಅವಲೋಕನ ನಡೆಸಿತು.


ಕಳೆದ ಮೂರು ಚುನಾವಣೆಯ ಸಂದರ್ಭದಲ್ಲಿಯೂ ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯ ವಿಲೇವಾರಿ ಘಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ಆಡಳಿತ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಿಲ್ಲ. ಜ್ವಲಂತ ಸಮಸ್ಯೆಗಳು ಹಾಗೆಯೇ ಉಳಿದಿದೆ. ಇದೀಗ ನಗರ ಪಂಚಾಯತ್ ಚುನಾವಣೆ ಘೋಷಣೆ ಯಾಗಿರುವ ಹಿನ್ನಲೆಯಲ್ಲಿ ನಗರದ ಈ ಸಮಸ್ಯೆಗಳ ಅವಲೋಕನ ಮಾಡಿ ಸಮಸ್ಯೆಗಳನ್ನು ಜನರ ಮುಂದಿಡುವ ಉದ್ದೇಶದಿಂದ ನಗರ ಪರ್ಯಟನೆ ನಡೆಸುತ್ತಿದ್ದೇವೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು.

ನಗರ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಂ.ಮುಸ್ತಫಾ, ಜೂಲಿಯಾ ಕ್ರಾಸ್ತಾ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಲಕ್ಷ್ಮಣ ಶೆಣೈ, ರಿಯಾಝ್ ಕಟ್ಟೆಕ್ಕರ್, ಧೀರಾ ಕ್ರಾಸ್ತಾ, ಶರೀಫ್ ಕಂಠಿ, ವಿಜಯ ಬಂಗ್ಲೆಗುಡ್ಡೆ, ಬಾಲಕೃಷ್ಣ ಬೀರಮಂಗಲ ಮತ್ತಿತರರು ತಂಡದಲ್ಲಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

27 minutes ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 hour ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

5 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

8 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

17 hours ago