Advertisement
Political mirror

ಸುಳ್ಯ ನಗರಾಡಳಿತದ ಚುಕ್ಕಾಣಿ ಯಾರಿಗೆ..?

Share

ಸುಳ್ಯ: ನಗರ ಪಂಚಾಯತ್ ಆಡಳಿತ ಯಾರಿಗೆ ಒಲಿಯುತ್ತದೆ ? ಈ ಪ್ರಶ್ನೆ ಎಲ್ಲೆಡೆ ಇದೆ. ಕುತೂಹಲ ಎಲ್ಲರಿಗೂ ಇದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗಲೂ ಆಗುತ್ತಿದೆ.  ಈಗ ನಗರ ಪಂಚಾಯತ್ ಚುನಾವಣೆ ಮುಗಿದು ಮತದಾರನ ತೀರ್ಪು ಇ.ವಿ.ಎಂನಲ್ಲಿ ಭದ್ರವಾಗಿದೆ. ಇನ್ನು ಕೇವಲ 36 ಗಂಟೆಗಳಲ್ಲಿ ನಗರ ಪಂಚಾಯತ್ ನ ಆಡಳಿತ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಅಧಿಕೃತವಾಗಿ ಫಲಿತಾಂಶ ಹೊರಬರಲಿದೆ.

ನಗರ ಪಂಚಾಯತ್ ನಲ್ಲಿ ಮತ್ತೆ ಕಮಲ ಅರಳುತ್ತದಾ.. … ಅಥವಾ ಆಡಳಿತ ಕೈ ವಶವಾಗುತ್ತದಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸುಳ್ಯನ್ಯೂಸ್.ಕಾಂ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರೊಂದಿಗೆ ಮತ್ತು 20 ವಾರ್ಡ್ ಗಳ ಮತದಾರರೊಂದಿಗೆ ಮಾತುಕತೆ ನಡೆಸಿದಾಗ ಬಂದ ಅಭಿಪ್ರಾಯಗಳನ್ನು ಕ್ರೂಡೀಕರಿಸಿ ಇದನ್ನು ಓದುಗರ ಮುಂದಿಡುತ್ತಿದ್ದೇವೆ.

20 ವಾರ್ಡ್ ಗಳಲ್ಲಿ ಏಳು ವಾರ್ಡ್ ಗಳಲ್ಲಿ ಬಿರುಸಿನ ಮತ್ತು ತೀವ್ರ ಪೈಪೋಟಿ ಕಂಡು ಬಂದಿದೆ. ಪೋಟೋ ಫಿನೀಶ್ ಫಲಿತಾಂಶ ನೀಡುವ ಈ 7 ವಾರ್ಡ್ ಗಳು ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ ಎರಡೂ ಪಕ್ಷಗಳಿಗೆ ತಮ್ಮ ಭದ್ರವಾದ ವಾರ್ಡ್ ಗಳನ್ನು ಪಡೆಯುವುದರ ಜೊತೆಗೆ ಈ 7 ವಾರ್ಡ್ ಯಾರ ತೆಕ್ಕೆಗೆ ಬೀಳುತ್ತದೆ ಎಂಬುದರ ಆಧಾರದಲ್ಲಿ ಅಧಿಕಾರದ ಸಾಧ್ಯತೆಯನ್ನು ತೆರೆದಿಡಲಿದೆ.

7 ವಾರ್ಡ್ ಗಳ ಫಲಿತಾಂಶದ ಕುತೂಹಲ ಉಳಿದಿದ್ದು ಈ ವಾರ್ಡ್ ಗಳ ಫಲಿತಾಂಶ ಎರಡೂ ಪಕ್ಷಗಳಿಗೆ ಹಂಚಿ ಹೋಗಲಿದ್ದು ಆಡಳಿತಾರೂಢ ಬಿಜೆಪಿ 10 ರಿಂದ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದ್ದರೆ ಕಾಂಗ್ರೆಸ್ 8 ರಿಂದ 11 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಒಂದು ಸ್ಥಾನ ಎಸ್ ಡಿ‌ ಪಿ ಐ ಮತ್ತು ಒಂದು ಸ್ಥಾನ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ.

 

( ಸುಳ್ಯನ್ಯೂಸ್.ಕಾಂ ತಂಡ ಮತದಾರರೊಂದಿಗೆ ಮಾತನಾಡಿದ ಹಾಗೂ ಪ್ರಮುಖರೊಂದಿಗೆ ಮಾತನಾಡಿದ ಆಧಾರದಲ್ಲಿ ಈ ವಿಶ್ಲೇಷಣೆ ಮಾಡಲಾಗಿದೆ. ಯಾವುದೇ ವೈಜ್ಞಾನಿಕ ಆಧಾರದಲ್ಲಿ  ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಶೇ.100 ರಷ್ಟು ಖಚಿತವಾದ ವಿಶ್ಲೇಷಣೆ ಸಾಧ್ಯವಾಗಿಲ್ಲ. ಇದು ಮೇಲ್ನೋಟದ ಮಾಹಿತಿಯಷ್ಟೇ. ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. – ಸಂಪಾದಕ )

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

11 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

19 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago