Advertisement
Political mirror

ಸುಳ್ಯ ನಗರಾಡಳಿತದ ಚುಕ್ಕಾಣಿ ಯಾರಿಗೆ..?

Share

ಸುಳ್ಯ: ನಗರ ಪಂಚಾಯತ್ ಆಡಳಿತ ಯಾರಿಗೆ ಒಲಿಯುತ್ತದೆ ? ಈ ಪ್ರಶ್ನೆ ಎಲ್ಲೆಡೆ ಇದೆ. ಕುತೂಹಲ ಎಲ್ಲರಿಗೂ ಇದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗಲೂ ಆಗುತ್ತಿದೆ.  ಈಗ ನಗರ ಪಂಚಾಯತ್ ಚುನಾವಣೆ ಮುಗಿದು ಮತದಾರನ ತೀರ್ಪು ಇ.ವಿ.ಎಂನಲ್ಲಿ ಭದ್ರವಾಗಿದೆ. ಇನ್ನು ಕೇವಲ 36 ಗಂಟೆಗಳಲ್ಲಿ ನಗರ ಪಂಚಾಯತ್ ನ ಆಡಳಿತ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಅಧಿಕೃತವಾಗಿ ಫಲಿತಾಂಶ ಹೊರಬರಲಿದೆ.

ನಗರ ಪಂಚಾಯತ್ ನಲ್ಲಿ ಮತ್ತೆ ಕಮಲ ಅರಳುತ್ತದಾ.. … ಅಥವಾ ಆಡಳಿತ ಕೈ ವಶವಾಗುತ್ತದಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸುಳ್ಯನ್ಯೂಸ್.ಕಾಂ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರೊಂದಿಗೆ ಮತ್ತು 20 ವಾರ್ಡ್ ಗಳ ಮತದಾರರೊಂದಿಗೆ ಮಾತುಕತೆ ನಡೆಸಿದಾಗ ಬಂದ ಅಭಿಪ್ರಾಯಗಳನ್ನು ಕ್ರೂಡೀಕರಿಸಿ ಇದನ್ನು ಓದುಗರ ಮುಂದಿಡುತ್ತಿದ್ದೇವೆ.

20 ವಾರ್ಡ್ ಗಳಲ್ಲಿ ಏಳು ವಾರ್ಡ್ ಗಳಲ್ಲಿ ಬಿರುಸಿನ ಮತ್ತು ತೀವ್ರ ಪೈಪೋಟಿ ಕಂಡು ಬಂದಿದೆ. ಪೋಟೋ ಫಿನೀಶ್ ಫಲಿತಾಂಶ ನೀಡುವ ಈ 7 ವಾರ್ಡ್ ಗಳು ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ ಎರಡೂ ಪಕ್ಷಗಳಿಗೆ ತಮ್ಮ ಭದ್ರವಾದ ವಾರ್ಡ್ ಗಳನ್ನು ಪಡೆಯುವುದರ ಜೊತೆಗೆ ಈ 7 ವಾರ್ಡ್ ಯಾರ ತೆಕ್ಕೆಗೆ ಬೀಳುತ್ತದೆ ಎಂಬುದರ ಆಧಾರದಲ್ಲಿ ಅಧಿಕಾರದ ಸಾಧ್ಯತೆಯನ್ನು ತೆರೆದಿಡಲಿದೆ.

7 ವಾರ್ಡ್ ಗಳ ಫಲಿತಾಂಶದ ಕುತೂಹಲ ಉಳಿದಿದ್ದು ಈ ವಾರ್ಡ್ ಗಳ ಫಲಿತಾಂಶ ಎರಡೂ ಪಕ್ಷಗಳಿಗೆ ಹಂಚಿ ಹೋಗಲಿದ್ದು ಆಡಳಿತಾರೂಢ ಬಿಜೆಪಿ 10 ರಿಂದ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದ್ದರೆ ಕಾಂಗ್ರೆಸ್ 8 ರಿಂದ 11 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಒಂದು ಸ್ಥಾನ ಎಸ್ ಡಿ‌ ಪಿ ಐ ಮತ್ತು ಒಂದು ಸ್ಥಾನ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ.

 

( ಸುಳ್ಯನ್ಯೂಸ್.ಕಾಂ ತಂಡ ಮತದಾರರೊಂದಿಗೆ ಮಾತನಾಡಿದ ಹಾಗೂ ಪ್ರಮುಖರೊಂದಿಗೆ ಮಾತನಾಡಿದ ಆಧಾರದಲ್ಲಿ ಈ ವಿಶ್ಲೇಷಣೆ ಮಾಡಲಾಗಿದೆ. ಯಾವುದೇ ವೈಜ್ಞಾನಿಕ ಆಧಾರದಲ್ಲಿ  ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಶೇ.100 ರಷ್ಟು ಖಚಿತವಾದ ವಿಶ್ಲೇಷಣೆ ಸಾಧ್ಯವಾಗಿಲ್ಲ. ಇದು ಮೇಲ್ನೋಟದ ಮಾಹಿತಿಯಷ್ಟೇ. ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. – ಸಂಪಾದಕ )

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

38 minutes ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

54 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

15 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago