Advertisement
Political mirror

ಸುಳ್ಯ ನಗರಾಡಳಿತದ ಚುಕ್ಕಾಣಿ ಯಾರಿಗೆ..?

Share

ಸುಳ್ಯ: ನಗರ ಪಂಚಾಯತ್ ಆಡಳಿತ ಯಾರಿಗೆ ಒಲಿಯುತ್ತದೆ ? ಈ ಪ್ರಶ್ನೆ ಎಲ್ಲೆಡೆ ಇದೆ. ಕುತೂಹಲ ಎಲ್ಲರಿಗೂ ಇದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗಲೂ ಆಗುತ್ತಿದೆ.  ಈಗ ನಗರ ಪಂಚಾಯತ್ ಚುನಾವಣೆ ಮುಗಿದು ಮತದಾರನ ತೀರ್ಪು ಇ.ವಿ.ಎಂನಲ್ಲಿ ಭದ್ರವಾಗಿದೆ. ಇನ್ನು ಕೇವಲ 36 ಗಂಟೆಗಳಲ್ಲಿ ನಗರ ಪಂಚಾಯತ್ ನ ಆಡಳಿತ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಅಧಿಕೃತವಾಗಿ ಫಲಿತಾಂಶ ಹೊರಬರಲಿದೆ.

ನಗರ ಪಂಚಾಯತ್ ನಲ್ಲಿ ಮತ್ತೆ ಕಮಲ ಅರಳುತ್ತದಾ.. … ಅಥವಾ ಆಡಳಿತ ಕೈ ವಶವಾಗುತ್ತದಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸುಳ್ಯನ್ಯೂಸ್.ಕಾಂ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರೊಂದಿಗೆ ಮತ್ತು 20 ವಾರ್ಡ್ ಗಳ ಮತದಾರರೊಂದಿಗೆ ಮಾತುಕತೆ ನಡೆಸಿದಾಗ ಬಂದ ಅಭಿಪ್ರಾಯಗಳನ್ನು ಕ್ರೂಡೀಕರಿಸಿ ಇದನ್ನು ಓದುಗರ ಮುಂದಿಡುತ್ತಿದ್ದೇವೆ.

20 ವಾರ್ಡ್ ಗಳಲ್ಲಿ ಏಳು ವಾರ್ಡ್ ಗಳಲ್ಲಿ ಬಿರುಸಿನ ಮತ್ತು ತೀವ್ರ ಪೈಪೋಟಿ ಕಂಡು ಬಂದಿದೆ. ಪೋಟೋ ಫಿನೀಶ್ ಫಲಿತಾಂಶ ನೀಡುವ ಈ 7 ವಾರ್ಡ್ ಗಳು ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ ಎರಡೂ ಪಕ್ಷಗಳಿಗೆ ತಮ್ಮ ಭದ್ರವಾದ ವಾರ್ಡ್ ಗಳನ್ನು ಪಡೆಯುವುದರ ಜೊತೆಗೆ ಈ 7 ವಾರ್ಡ್ ಯಾರ ತೆಕ್ಕೆಗೆ ಬೀಳುತ್ತದೆ ಎಂಬುದರ ಆಧಾರದಲ್ಲಿ ಅಧಿಕಾರದ ಸಾಧ್ಯತೆಯನ್ನು ತೆರೆದಿಡಲಿದೆ.

7 ವಾರ್ಡ್ ಗಳ ಫಲಿತಾಂಶದ ಕುತೂಹಲ ಉಳಿದಿದ್ದು ಈ ವಾರ್ಡ್ ಗಳ ಫಲಿತಾಂಶ ಎರಡೂ ಪಕ್ಷಗಳಿಗೆ ಹಂಚಿ ಹೋಗಲಿದ್ದು ಆಡಳಿತಾರೂಢ ಬಿಜೆಪಿ 10 ರಿಂದ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದ್ದರೆ ಕಾಂಗ್ರೆಸ್ 8 ರಿಂದ 11 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಒಂದು ಸ್ಥಾನ ಎಸ್ ಡಿ‌ ಪಿ ಐ ಮತ್ತು ಒಂದು ಸ್ಥಾನ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ.

 

( ಸುಳ್ಯನ್ಯೂಸ್.ಕಾಂ ತಂಡ ಮತದಾರರೊಂದಿಗೆ ಮಾತನಾಡಿದ ಹಾಗೂ ಪ್ರಮುಖರೊಂದಿಗೆ ಮಾತನಾಡಿದ ಆಧಾರದಲ್ಲಿ ಈ ವಿಶ್ಲೇಷಣೆ ಮಾಡಲಾಗಿದೆ. ಯಾವುದೇ ವೈಜ್ಞಾನಿಕ ಆಧಾರದಲ್ಲಿ  ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಶೇ.100 ರಷ್ಟು ಖಚಿತವಾದ ವಿಶ್ಲೇಷಣೆ ಸಾಧ್ಯವಾಗಿಲ್ಲ. ಇದು ಮೇಲ್ನೋಟದ ಮಾಹಿತಿಯಷ್ಟೇ. ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. – ಸಂಪಾದಕ )

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

52 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 hour ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago