Advertisement
Political mirror

ಸುಳ್ಯ ನಗರಾಡಳಿತದ ಚುಕ್ಕಾಣಿ ಯಾರಿಗೆ..?

Share

ಸುಳ್ಯ: ನಗರ ಪಂಚಾಯತ್ ಆಡಳಿತ ಯಾರಿಗೆ ಒಲಿಯುತ್ತದೆ ? ಈ ಪ್ರಶ್ನೆ ಎಲ್ಲೆಡೆ ಇದೆ. ಕುತೂಹಲ ಎಲ್ಲರಿಗೂ ಇದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗಲೂ ಆಗುತ್ತಿದೆ.  ಈಗ ನಗರ ಪಂಚಾಯತ್ ಚುನಾವಣೆ ಮುಗಿದು ಮತದಾರನ ತೀರ್ಪು ಇ.ವಿ.ಎಂನಲ್ಲಿ ಭದ್ರವಾಗಿದೆ. ಇನ್ನು ಕೇವಲ 36 ಗಂಟೆಗಳಲ್ಲಿ ನಗರ ಪಂಚಾಯತ್ ನ ಆಡಳಿತ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಅಧಿಕೃತವಾಗಿ ಫಲಿತಾಂಶ ಹೊರಬರಲಿದೆ.

ನಗರ ಪಂಚಾಯತ್ ನಲ್ಲಿ ಮತ್ತೆ ಕಮಲ ಅರಳುತ್ತದಾ.. … ಅಥವಾ ಆಡಳಿತ ಕೈ ವಶವಾಗುತ್ತದಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸುಳ್ಯನ್ಯೂಸ್.ಕಾಂ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರೊಂದಿಗೆ ಮತ್ತು 20 ವಾರ್ಡ್ ಗಳ ಮತದಾರರೊಂದಿಗೆ ಮಾತುಕತೆ ನಡೆಸಿದಾಗ ಬಂದ ಅಭಿಪ್ರಾಯಗಳನ್ನು ಕ್ರೂಡೀಕರಿಸಿ ಇದನ್ನು ಓದುಗರ ಮುಂದಿಡುತ್ತಿದ್ದೇವೆ.

20 ವಾರ್ಡ್ ಗಳಲ್ಲಿ ಏಳು ವಾರ್ಡ್ ಗಳಲ್ಲಿ ಬಿರುಸಿನ ಮತ್ತು ತೀವ್ರ ಪೈಪೋಟಿ ಕಂಡು ಬಂದಿದೆ. ಪೋಟೋ ಫಿನೀಶ್ ಫಲಿತಾಂಶ ನೀಡುವ ಈ 7 ವಾರ್ಡ್ ಗಳು ನಿರ್ಣಾಯಕವಾಗಲಿದೆ. ಒಟ್ಟಿನಲ್ಲಿ ಎರಡೂ ಪಕ್ಷಗಳಿಗೆ ತಮ್ಮ ಭದ್ರವಾದ ವಾರ್ಡ್ ಗಳನ್ನು ಪಡೆಯುವುದರ ಜೊತೆಗೆ ಈ 7 ವಾರ್ಡ್ ಯಾರ ತೆಕ್ಕೆಗೆ ಬೀಳುತ್ತದೆ ಎಂಬುದರ ಆಧಾರದಲ್ಲಿ ಅಧಿಕಾರದ ಸಾಧ್ಯತೆಯನ್ನು ತೆರೆದಿಡಲಿದೆ.

7 ವಾರ್ಡ್ ಗಳ ಫಲಿತಾಂಶದ ಕುತೂಹಲ ಉಳಿದಿದ್ದು ಈ ವಾರ್ಡ್ ಗಳ ಫಲಿತಾಂಶ ಎರಡೂ ಪಕ್ಷಗಳಿಗೆ ಹಂಚಿ ಹೋಗಲಿದ್ದು ಆಡಳಿತಾರೂಢ ಬಿಜೆಪಿ 10 ರಿಂದ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದ್ದರೆ ಕಾಂಗ್ರೆಸ್ 8 ರಿಂದ 11 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಒಂದು ಸ್ಥಾನ ಎಸ್ ಡಿ‌ ಪಿ ಐ ಮತ್ತು ಒಂದು ಸ್ಥಾನ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ.

 

( ಸುಳ್ಯನ್ಯೂಸ್.ಕಾಂ ತಂಡ ಮತದಾರರೊಂದಿಗೆ ಮಾತನಾಡಿದ ಹಾಗೂ ಪ್ರಮುಖರೊಂದಿಗೆ ಮಾತನಾಡಿದ ಆಧಾರದಲ್ಲಿ ಈ ವಿಶ್ಲೇಷಣೆ ಮಾಡಲಾಗಿದೆ. ಯಾವುದೇ ವೈಜ್ಞಾನಿಕ ಆಧಾರದಲ್ಲಿ  ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಶೇ.100 ರಷ್ಟು ಖಚಿತವಾದ ವಿಶ್ಲೇಷಣೆ ಸಾಧ್ಯವಾಗಿಲ್ಲ. ಇದು ಮೇಲ್ನೋಟದ ಮಾಹಿತಿಯಷ್ಟೇ. ಇದರಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. – ಸಂಪಾದಕ )

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

20 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago