Advertisement
ಸುದ್ದಿಗಳು

ಸುಳ್ಯ ನಗರ ಪಂಚಾಯತ್ ಕಟ್ಟಡದಲ್ಲಿ ಕಸ ರಾಶಿ- ಕಸವನ್ನು ಬೇರ್ಪಡಿಸಿ ವಾರದಲ್ಲಿ ವಿಲೇವಾರಿಗೆ ಸಿಂಧು ಬಿ ರೂಪೇಶ್ ಆದೇಶ

Share

ಸುಳ್ಯ: ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯವನ್ನು ನೋಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ನಗರ ಪಂಚಾಯಿತಿ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆಯಿತು.

ಶುಕ್ರವಾರ ಸುಳ್ಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಗರ ಪಂಚಾಯಿತಿಯ ಮುಂಭಾಗದ ಕಟ್ಟಡದಲ್ಲಿ ಮತ್ತು ಹಿಂಭಾಗದಲ್ಲಿ ಸುರಿಯಲಾಗಿರುವ ತ್ಯಾಜ್ಯ ರಾಶಿಯನ್ನು ವೀಕ್ಷಿಸಿದರು. ಇಲ್ಲಿ ತುಂಬಿಡಲಾಗಿರುವ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಬೇಕು ಎಂದು ಅವರು ಸೂಚಿಸಿದರು. ಎಷ್ಟು ವಿಧದಲ್ಲಿ ಬೇರ್ಪಡಿಸಲು ಸಾಧ್ಯವೋ ಅಷ್ಟು ವಿಧದಲ್ಲಿ ಬೇರ್ಪಡಿಸಬೇಕು. ಅದನ್ನು ಎಷ್ಟು ಮರು ಬಳಕೆಗೆ ಸಾಧ್ಯವೋ ಅಷ್ಟನ್ನು ಮಾರಾಟ ಮಾಡಿ ನಗರ ಪಂಚಾಯತ್‍ಗೆ ಆದಾಯ ಬರುವಂತಾಗಬೇಕು. ಒಂದು ವಾರದಲ್ಲಿ ತ್ಯಾಜ್ಯವನ್ನು ಸಂಪೂರ್ಣ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಕೂಡಲೇ ಕಸ ಬೇರ್ಪಡಿಸುವ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಸ ವಿಲೇವಾರಿ ಮಾಡಿದ ಪ್ರಗತಿಯ ಬಗ್ಗೆ ವರದಿಯನ್ನು ಪೋಟೋ ಸಮೇತ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.

ಕಸ ವಿಲೇವಾರಿಗೆ ಸೂಚನೆ ನೀಡಿದರೂ ಪಾಲಿಸುತ್ತಿಲ್ಲ. ತ್ಯಾಜ್ಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ತೀವ್ರ ಸಮಸ್ಯೆ ಸೃಷ್ಠಿಸಿದೆ ಎಂದು ನಗರ ಪಂಚಾಯಿತಿ ಆಡಳಿತಾಧಿಕಾರಿ, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಹಾಗು ನಗರ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. ಈ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಎಲ್ಲಾ ತ್ಯಾಜ್ಯವನ್ನು ವಾರದಲ್ಲಿ ವಿಲೇವಾರಿ ಮಾಡಿ ವರದಿ ನೀಡುವಂತೆ ಮುಖ್ಯಾಧಿಕಾರಿ ಆದೇಶ ನೀಡಿದರು. ಸುಳ್ಯ ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಕುಂಞ ಅಹಮ್ಮದ್ ಸುಳ್ಯ ನಗರದ ತ್ಯಾಜ್ಯ ವಿಲೇವಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ಅವರು ನಗರ ಪಂಚಾಯಿತಿಗೆ ಆಗಮಿಸಿ ತ್ಯಾಜ್ಯ ವಿಲೇವಾರಿಯ ಅವ್ಯವಸ್ಥೆಯನ್ನು ವೀಕ್ಷಿಸಿದರು.

ಪ್ರತಿದಿನದ ತ್ಯಾಜ್ಯವನ್ನು ಹಸಿ ಕಸ, ಒಣಕಸ ಎಂದು ಬೇರ್ಪಡಿಸಿ ಸಂಗ್ರಹಿಸಬೇಕು ಮತ್ತು ಅದೇ ದಿನದ ಕಸವನ್ನು ಅದೇ ದಿನ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನ.ಪಂ. ಮುಖ್ಯಾಧಿಕಾರಿಗೆ ಮತ್ತಡಿ ಅವರಿಗೆ ಖಡಕ್ ಆಗಿ ಆದೇಶ ನೀಡಿದರು. ಕಸ ವಿಲೇವಾರಿ ನಡೆಸಲು ಬರ್ನಿಂಗ್ ಮೆಷಿನ್ ಖರೀದಿಸಲು ಅನುಮೋದನೆ ನೀಡುವುದಾಗಿ ಅವರು ತಿಳಿಸಿದರು.
ನಗರ ಪಂಚಾಯಿತಿ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ವಾಣಿಶ್ರೀ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago