ಸುಳ್ಯ: ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯವನ್ನು ನೋಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ನಗರ ಪಂಚಾಯಿತಿ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆಯಿತು.
ಶುಕ್ರವಾರ ಸುಳ್ಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಗರ ಪಂಚಾಯಿತಿಯ ಮುಂಭಾಗದ ಕಟ್ಟಡದಲ್ಲಿ ಮತ್ತು ಹಿಂಭಾಗದಲ್ಲಿ ಸುರಿಯಲಾಗಿರುವ ತ್ಯಾಜ್ಯ ರಾಶಿಯನ್ನು ವೀಕ್ಷಿಸಿದರು. ಇಲ್ಲಿ ತುಂಬಿಡಲಾಗಿರುವ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಬೇಕು ಎಂದು ಅವರು ಸೂಚಿಸಿದರು. ಎಷ್ಟು ವಿಧದಲ್ಲಿ ಬೇರ್ಪಡಿಸಲು ಸಾಧ್ಯವೋ ಅಷ್ಟು ವಿಧದಲ್ಲಿ ಬೇರ್ಪಡಿಸಬೇಕು. ಅದನ್ನು ಎಷ್ಟು ಮರು ಬಳಕೆಗೆ ಸಾಧ್ಯವೋ ಅಷ್ಟನ್ನು ಮಾರಾಟ ಮಾಡಿ ನಗರ ಪಂಚಾಯತ್ಗೆ ಆದಾಯ ಬರುವಂತಾಗಬೇಕು. ಒಂದು ವಾರದಲ್ಲಿ ತ್ಯಾಜ್ಯವನ್ನು ಸಂಪೂರ್ಣ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಕೂಡಲೇ ಕಸ ಬೇರ್ಪಡಿಸುವ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಸ ವಿಲೇವಾರಿ ಮಾಡಿದ ಪ್ರಗತಿಯ ಬಗ್ಗೆ ವರದಿಯನ್ನು ಪೋಟೋ ಸಮೇತ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಕಸ ವಿಲೇವಾರಿಗೆ ಸೂಚನೆ ನೀಡಿದರೂ ಪಾಲಿಸುತ್ತಿಲ್ಲ. ತ್ಯಾಜ್ಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ತೀವ್ರ ಸಮಸ್ಯೆ ಸೃಷ್ಠಿಸಿದೆ ಎಂದು ನಗರ ಪಂಚಾಯಿತಿ ಆಡಳಿತಾಧಿಕಾರಿ, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಹಾಗು ನಗರ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. ಈ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಎಲ್ಲಾ ತ್ಯಾಜ್ಯವನ್ನು ವಾರದಲ್ಲಿ ವಿಲೇವಾರಿ ಮಾಡಿ ವರದಿ ನೀಡುವಂತೆ ಮುಖ್ಯಾಧಿಕಾರಿ ಆದೇಶ ನೀಡಿದರು. ಸುಳ್ಯ ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಕುಂಞ ಅಹಮ್ಮದ್ ಸುಳ್ಯ ನಗರದ ತ್ಯಾಜ್ಯ ವಿಲೇವಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ಅವರು ನಗರ ಪಂಚಾಯಿತಿಗೆ ಆಗಮಿಸಿ ತ್ಯಾಜ್ಯ ವಿಲೇವಾರಿಯ ಅವ್ಯವಸ್ಥೆಯನ್ನು ವೀಕ್ಷಿಸಿದರು.
ಪ್ರತಿದಿನದ ತ್ಯಾಜ್ಯವನ್ನು ಹಸಿ ಕಸ, ಒಣಕಸ ಎಂದು ಬೇರ್ಪಡಿಸಿ ಸಂಗ್ರಹಿಸಬೇಕು ಮತ್ತು ಅದೇ ದಿನದ ಕಸವನ್ನು ಅದೇ ದಿನ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನ.ಪಂ. ಮುಖ್ಯಾಧಿಕಾರಿಗೆ ಮತ್ತಡಿ ಅವರಿಗೆ ಖಡಕ್ ಆಗಿ ಆದೇಶ ನೀಡಿದರು. ಕಸ ವಿಲೇವಾರಿ ನಡೆಸಲು ಬರ್ನಿಂಗ್ ಮೆಷಿನ್ ಖರೀದಿಸಲು ಅನುಮೋದನೆ ನೀಡುವುದಾಗಿ ಅವರು ತಿಳಿಸಿದರು.
ನಗರ ಪಂಚಾಯಿತಿ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ವಾಣಿಶ್ರೀ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…