Advertisement
MIRROR FOCUS

ಸುಳ್ಯ ನಗರ ಪಂಚಾಯತ್ ತ್ಯಾಜ್ಯ ತೆರವಿಗೆ ಶೀಘ್ರದಲ್ಲೇ ಕ್ರಮ : ಜನರಿಗೆ ನೆಮ್ಮದಿಯ ಉಸಿರು…

Share

ಸುಳ್ಯ:ಸುಳ್ಯ ನಗರ ಪಂಚಾಯತ್ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸವನ್ನು ತೆರವು ಮಾಡಲು ಮತ್ತು ಕಸ ವಿಲೇವಾರಿಗೆ ಬರ್ನಿಂಗ್ ಮೆಷಿನ್ ಖರೀದಿಗೆ ಸುಳ್ಯ ನಗರ ಪಂಚಾಯತ್ ನಲ್ಲಿ ನಡೆದ ವಿಶೇಷ ಸಭೆಯಲ್ಲಿ ನಿರ್ಧರಿಸಲಾಯಿತು. ಕಳೆದ ಎರಡು ವಾರಗಳಿಂದ ಸ್ಥಗಿತಗೊಂಡಿದ್ದ ನಗರದ ಕಸ ಸಂಗ್ರಹವನ್ನು ಮಂಗಳವಾರದಿಂದಲೇ ಆರಂಭಿಸಲು ನಿರ್ಧರಿಸಲಾಯಿತು.

ಶಾಸಕ ಎಸ್.ಅಂಗಾರ ಉಪಸ್ಥಿತಿಯಲ್ಲಿ ನಗರ ಪಂಚಾಯತ್ ಸದಸ್ಯರ, ಅಧಿಕಾರಿಗಳ ಮತ್ತು ಸಾರ್ವಜನಿಕರ ಸಭೆ ನಡೆಸಲಾಯಿತು. ಐದು ಲಕ್ಷರೂ ಮೊತ್ತದ ಬರ್ನಿಂಗ್ ಮೆಷಿನ್ ಖರೀದಿಸಲು ನಿರ್ಧರಿಸಲಾಯಿತು. ಇದಕ್ಕೆ ಕೂಡಲೇ ಅನುಮತಿ ನೀಡುವ ಕುರಿತು ಶಾಸಕರು ಜಿಲ್ಲಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು. ನ.ಪಂ.ಕಟ್ಟಡದಲ್ಲಿ ತುಂಬಿಡಲಾದ ಕಸ ಸಾಗಾಟಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಅದಕ್ಕೆ ಟೆಂಡರ್ ಕರೆಯಲು ಸೂಚಿಸಲಾಯಿತು.

ನಗರ ಪಂಚಾಯತ್ ನ ಕಸ ವಿಲೇವಾರಿ ಅವ್ಯವಸ್ಥೆಯ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು. ಕಸ ಸಂಗ್ರಹ ನಿಲ್ಲಿಸಿರುವುದಕ್ಕೆ ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್, ಶರೀಫ್ ಕಂಠಿ ಮೊದಲಾದವರು ಅಧಿಕಾರಿಗಳನ್ನು  ತರಾಟೆಗೆತ್ತಿಕೊಂಡರು. ಕಸ ವಿಲೇವಾರಿ ನಿಲ್ಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ ಸದಸ್ಯರು
ಕಸ ವಿಲೇವಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರು ಕ್ರಮ ಜರುಗಿಸುವುದಾಗಿ ತಿಳಿಸಿದರು. ಬಳಿಕ ಕಸ ವಿಲೇವಾರಿ ಮಾಡಲು ವಿಫಲರಾದವರ ವಿರುದ್ಧ ಕ್ರಮಕ್ಕೆ ಕೈಗೊಳ್ಳಬೇಕೆಂದು ಶಾಸಕರಲ್ಲಿಯೂ ಸದಸ್ಯರು ಪಟ್ಟು ಹಿಡಿದರು. ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ತಹಶೀಲ್ದಾರ್ ರಿಗೆ ಸೂಚಿಸಿದರು.

ನಗರ ಪಂಚಾಯತ್ ನ ಕಸ ವಿಲೇವಾರಿ ಘಟಕ ಕಲ್ಚರ್ಪೆಯಲ್ಲಿ ಒಂದು ವರ್ಷದಿಂದ ಕಸ ಹಾಕದಿರುವ ಬಗ್ಗೆ ಮತ್ತು ಅಲ್ಲಿ ತುಂಬಿರುವ ಕಸವನ್ನು ತೆರವು ಮಾಡದ ಬಗ್ಗೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಕಲ್ಚರ್ಪೆಯಲ್ಲಿ ಕಸ ಹಾಕುವುದನ್ನು ನಿಲ್ಲಿಸಿರುವುದಕ್ಕೆ ಯಾಕೆ ಎಂದು ಪ್ರಶ್ನಿಸಿದ ಸದಸ್ಯರು ಅಲ್ಲಿ ತುಂಬಿರುವ ಕಸವನ್ನು ವಿಲೇವಾರಿ ಮಾಡಿ ಅಲ್ಲಿ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ಕಸವನ್ನು ಕೊಂಡೊಯ್ದು ಹಿಂದು ರುದ್ರಭೂಮಿಗೆ ಹಾಕಿರುವುದಕ್ಕೆ ನ.ಪಂ.ಸದಸ್ಯ ಬಾಲಕೃಷ್ಣ ಭಟ್ ಅಸಮಾಧಾನ ವ್ಯಕ್ತಪಡಿಸಿದರು.

ನಗರ ಪಂಚಾಯತ್ ಸದಸ್ಯರಾದ ಸುಧಾಕರ, ಶಶಿಕಲಾ, ಶಿಲ್ಪಾ ಸುದೇವ್,ಕಿಶೋರಿ ಶೇಠ್, ನಾರಾಯಣ, ಧೀರಾ ಕ್ತಾಸ್ತಾ, ವಾಣಿಶ್ರೀ, ಪೂಜಿತಾ, ಸರೋಜಿನಿ ಪೆಲ್ತಡ್ಕ, ಸುಶೀಲಾ ಜಿನ್ನಪ್ಪ, ಶೀಲಾ ಅರುಣ ಕುರುಂಜಿ, ಪ್ರವಿತಾ ಪ್ರಶಾಂತ್, ಬುದ್ಧ ನಾಯ್ಕ್, ಪ್ರಮುಖರಾದ ವಿನೋದ್ ಲಸ್ರಾದೋ, ಕೆ.ಆರ್.ಮನಮೋಹನ, ಡಿ.ಎಂ.ಶಾರಿಖ್, ಮನೋಜ್ ರೈ ಮತ್ತಿತರರು ಮಾತನಾಡಿದರು.

ತಡವಾಗಿ ಆಗಮಿಸಿದ ಶಾಸಕರು- ಸದಸ್ಯರ ಮಧ್ಯೆ ವಾಗ್ವಾದ:

ಕಸ ವಿಲೇವಾರಿ ಸಂಬಂಧಿಸಿ ನಗರ ಪಂಚಾಯತ್ ಸಭೆಗೆ ಶಾಸಕ ಎಸ್.ಅಂಗಾರ ತಡವಾಗಿ ಆಗಮಿಸಿದರು. ಈ ಕುರಿತು ಸಭೆಯ ಆರಂಭದಲ್ಲಿ ನಗರ ಪಂಚಾಯತ್ ಸದಸ್ಯರ ಮಧ್ಯೆ ವಾಗ್ವಾದ ನಡೆಯಿತು. ಬಹು ಮುಖ್ಯವಾದ ಸಭೆಗೆ ಶಾಸಕರು ಬಾರದೇ ಇದ್ದುದು ಸರಿಯಲ್ಲ. ಶಾಸಕರಿಗೆ ಸಮಸ್ಯೆ ಪರಿಹರಿಸುವ ಕಾಳಜಿ ಇಲ್ಲ ಮತ್ತು ಅವರು ಜವಾಬ್ದಾರಿಯನ್ನು ನಿರ್ವಹಿಸುತ್ತಿಲ್ಲ ಎಂದು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದರು.

ಇದಕ್ಕೆ ಉತ್ತರಿಸಿದ ವಿನಯಕುಮಾರ್ ಕಂದಡ್ಕ ಶಾಸಕರು ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಾರೆ‌. ಶಾಸಕರಿಗೆ ಮೊದಲೇ ತಿಳಿಸದ ಕಾರಣ ಮತ್ತು ಅಧಿಕಾರಿಗಳು ಅವರ ಸಮಯವನ್ನು ಗೊತ್ತುಪಡಿಸದ ಕಾರಣ ಸಮಸ್ಯೆ ಆಗಿದೆ ಎಂದು ಹೇಳಿದರು. ಈ ಕುರಿತು ಸದಸ್ಯರ ಮಧ್ಯೆ ಚರ್ಚೆ ನಡೆಯಿತು. ಬಳಿಕ ಸಭೆ ಮುಂದುವರಿಯಿತು. ಕೆಲವೊಂದು ನಿರ್ಧಾರಗಳನ್ನು ಕೈಗೊಂಡು ಶಾಸಕರ ಉಪಸ್ಥಿತಿಯಲ್ಲಿ ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿ ಸಭೆ ಮುಕ್ತಾಯಗೊಳಿಸಲಾಯಿತು. ಸಭೆ ಮುಗಿಸಿ ಎಲ್ಲರೂ ಹೊರ ಬರುತ್ತಿದ್ದಂತೆ ಶಾಸಕ ಅಂಗಾರ ಆಗಮಿಸಿದರು.

ಬಳಿಕ ಶಾಸಕರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು. ಪೂರ್ವ ನಿಗದಿತ ಕಾರ್ಯಕ್ರಮ ಇದ್ದ ಕಾರಣ ತಡವಾಯಿತು ಎಂದು ಶಾಸಕರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

3 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

8 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

17 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

17 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

18 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

20 hours ago