ಸುಳ್ಯ: ಸುಳ್ಯ ನಗರ ಪಂಚಾಯತ್ ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಸವನ್ನು ಇಲ್ಲಿಂದ ತೆರವು ಮಾಡಲಾಗುತಿದೆ. ಇಲ್ಲಿಂದ ಕಸವನ್ನು ಲಾರಿಯಲ್ಲಿ ತುಂಬಿ ಬೇರೆ ಕಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುತಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಸವನ್ನು ನಗರ ಪಂಚಾಯತ್ ಕಚೇರಿ ಸಮೀಪವೇ ತುಂಬಿಡುವುದರಿಂದ ದುರ್ನಾತ ಬೀರುತ್ತಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…