ಸುಳ್ಯ: ಸುಳ್ಯ ನಗರ ಪಂಚಾಯತ್ ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಸವನ್ನು ಇಲ್ಲಿಂದ ತೆರವು ಮಾಡಲಾಗುತಿದೆ. ಇಲ್ಲಿಂದ ಕಸವನ್ನು ಲಾರಿಯಲ್ಲಿ ತುಂಬಿ ಬೇರೆ ಕಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುತಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಸವನ್ನು ನಗರ ಪಂಚಾಯತ್ ಕಚೇರಿ ಸಮೀಪವೇ ತುಂಬಿಡುವುದರಿಂದ ದುರ್ನಾತ ಬೀರುತ್ತಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…