Advertisement
ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

Advertisement
Advertisement
Advertisement
Advertisement

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

Advertisement

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

3 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

3 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

3 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago