ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

Advertisement

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

5 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

5 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

5 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

5 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

5 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

5 hours ago