ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

Advertisement
Advertisement

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

9 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

19 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

20 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

20 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago