Advertisement
ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

Advertisement

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

8 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

19 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago