Advertisement
ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

13 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

14 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago