Advertisement
ಸುದ್ದಿಗಳು

ಸುಳ್ಯ ನಗರ ಸ್ವಚ್ಛತೆಯೆಡೆಗೆ ನೂತನ ಸದಸ್ಯರ ಚಿತ್ತ : ಇನ್ನೀಗ #ಸ್ವಚ್ಛಸುಳ್ಯ , ಬನ್ನಿ ನಾವೂ ಕೈಜೋಡಿಸೋಣ….

Share

ಸುಳ್ಯ: ಎಲ್ಲೆಲ್ಲೂ ಕಸ ತುಂಬಿ ನಾರುತ್ತಿರುವ ಸುಳ್ಯ ನಗರದ ಮೂಲೆ ಮೂಲೆಗಳಲ್ಲಿ ಸ್ವಚ್ಛತೆ ಕಾಪಾಡಲು ನಗರ ಪಂಚಾಯತ್ ಸದಸ್ಯರು ಆಸಕ್ತಿ ವಹಿಸುತ್ತಿದ್ದಾರೆ. ನೂತನ ಸದಸ್ಯರು #ಸ್ವಚ್ಛಸುಳ್ಯ ಕನಸು ಸಾಕಾರ ಮಾಡಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯ. ಈಗ ನಾಗರಿಕರ ಸಹಕಾರ ಅಗತ್ಯವಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಬೇಕಿದೆ.

10ನೇ ವಾರ್ಡ್ ಸದಸ್ಯ ವಿನಯಕುಮಾರ್ ಕಂದಡ್ಕ ಕುರುಂಜಿಗುಡ್ಡೆಯಲ್ಲಿ ಕಸ ತುಂಬಿರುವ ಪ್ರದೇಶವನ್ನು ಸ್ವಚ್ಛ ಗೊಳಿಸಲು ವಿಶೇಷ ಆಸಕ್ತಿ ವಹಿಸಿ   ಕ್ರಮ ತೆಗೆದುಕೊಂಡಿದ್ದಾರೆ. ಅದಾದ ಬೆನ್ನಲ್ಲೇ ಆದರೆ ಕಸ ಸ್ವಚ್ಛ ಮಾಡಿದ ಸ್ಥಳದಲ್ಲಿ ಮತ್ತೆ ಕಸದ ರಾಶಿ ಹಾಕಿರುವುದು ಕಂಡು ಬರುತ್ತದೆ.  ಸ್ವಚ್ಛ ಗೊಂಡ ಸ್ಥಳದಲ್ಲಿ ಮತ್ತೆ ಕಸ ಹಾಕಿರುವ ಚಿತ್ರಗಳನ್ನು ವಿನಯಕುಮಾರ್ ಕಂದಡ್ಕ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ‘ ಇದು ಎಂತಾ ನಾಗರಿಕತೆ‘ ಎಂದು ಪ್ರಶ್ನಿಸಿ ಅವರು ಈ ಚಿತ್ರಗಳನ್ನು ಹಂಚಿ ಕೊಂಡಿದ್ದಾರೆ.

ಸುಳ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಹಲವಾರು ತಿಂಗಳಿನಿಂದ ಕಸ ತುಂಬಿದ ಸ್ಥಳವನ್ನು ಸ್ವಚ್ಛ  ಮಾಡಲು ಬೋರುಗುಡ್ಡೆ ಸದಸ್ಯ ಕೆ.ಎಸ್.ಉಮ್ಮರ್ ಆಸಕ್ತಿ ವಹಿಸಿದ್ದಾರೆ. ಬಸ್ ನಿಲ್ದಾಣದ ಕೆಳ ರಸ್ತೆಯ ಮೂಲಕ ಮುಂದಕ್ಕೆ ಹೋದರೆ ಮೂರು ರಸ್ತೆ ಸೇರುವ ಸ್ಥಳದಲ್ಲಿ ಕಸ ತುಂಬಿ ದುರ್ನಾತ ಬೀರುತ್ತಿತ್ತು. ನಗರ ಪಂಚಾಯತ್ ಆರೋಗ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತ್ಯಾಜ್ಯ ತೆರವು ಮಾಡಲು ಅವರು ಖಡಕ್ ಸೂಚನೆ ನೀಡಿದ್ದಾರೆ.

ಇದೇ ಮಾದರಿ ನಗರ ಪಂಚಾಯತ್ ಸದಸ್ಯರು ಎಲ್ಲಾ ಸದಸ್ಯರು ಆಸಕ್ತಯಿಂದ ಇದ್ದು ಅವರವರ ವಾರ್ಡ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಹಾಗೂ ಜನರೂ ಸಹಕಾರ ನೀಡುವಂತೆ ಮಾಡುವ ಯೋಚನೆಯಲ್ಲಿದ್ದಾರೆ. ಹೀಗಾದರೆ #ಸ್ವಚ್ಛಸುಳ್ಯ ದ ಕನಸು  ಸದ್ಯದಲ್ಲೇ  ಸಾಕಾರವಾಗುವ ದಿನ ದೂರವಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

6 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

8 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

13 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

14 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

21 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

22 hours ago