Advertisement
ನಮ್ಮೂರ ಸುದ್ದಿ

ಸುಳ್ಯ ನೀರು ಸರಬರಾಜು ವ್ಯವಸ್ಥೆ ಸುಧಾರಣೆ : ಜಾಕ್ ವೆಲ್ ಬದಲಾವಣೆಗೆ 1.75 ಕೋಟಿ ರೂ ಯೋಜನೆ

Share

ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್ ಬದಲಾವಣೆಗೆ 1.75 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ. ನಗರೋತ್ಥಾನ ಯೋಜನೆಯಲ್ಲಿ ಬಂದ ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗುವುದು. ಕರ್ನಾಟಕ ಒಳಚರಂಡಿ ಮಂಡಳಿ ಕಾಮಗಾರಿ ನಿರ್ವಹಿಸಲಿದ್ದು ಟೆಂಡರ್ ನಡೆಯಬೇಕಾಗಿದೆ ಎಂದು ತಿಳಿಸಿದರು.

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್‍ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್‍ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆಯ ಹಿನ್ನಲೆಯಲ್ಲಿ ಮುಖ್ಯಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿವರ ನೀಡಿದರು.

ಶುದ್ದೀಕರಣ ಘಟಕಕ್ಕೆ 1.25 ಕೋಟಿ
ನಗರ ಪಂಚಾಯತ್ ನ  ಕುಡಿಯುವ ನೀರು ಸರಬರಾಜು ಮಾಡುವ ಶುದ್ದೀಕರಣ ಘಟಕ ಹಳೆಯದಾಗಿದೆ. ಇದರ ನವೀಕರಣಕ್ಕೆ 1.25 ಕೋಟಿಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದರು. ಈಗ 50 ಹೆಚ್.ಪಿ.ಯ ಎರಡು ಪಂಪ್‍ಗಳಲ್ಲಿ ನೀರು ಪಂಪಿಂಗ್ ಮಾಡಿದರೆ ಸಮರ್ಪಕವಾಗಿ ನೀರು ಶುದ್ದೀಕರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಶುದ್ಧೀಕರಣ ಘಟಕದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪ್ರಸ್ತಾವನೆ ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

7 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

7 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

8 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

16 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago