Advertisement
ನಮ್ಮೂರ ಸುದ್ದಿ

ಸುಳ್ಯ ನೀರು ಸರಬರಾಜು ವ್ಯವಸ್ಥೆ ಸುಧಾರಣೆ : ಜಾಕ್ ವೆಲ್ ಬದಲಾವಣೆಗೆ 1.75 ಕೋಟಿ ರೂ ಯೋಜನೆ

Share

ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್ ಬದಲಾವಣೆಗೆ 1.75 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ. ನಗರೋತ್ಥಾನ ಯೋಜನೆಯಲ್ಲಿ ಬಂದ ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗುವುದು. ಕರ್ನಾಟಕ ಒಳಚರಂಡಿ ಮಂಡಳಿ ಕಾಮಗಾರಿ ನಿರ್ವಹಿಸಲಿದ್ದು ಟೆಂಡರ್ ನಡೆಯಬೇಕಾಗಿದೆ ಎಂದು ತಿಳಿಸಿದರು.

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್‍ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್‍ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆಯ ಹಿನ್ನಲೆಯಲ್ಲಿ ಮುಖ್ಯಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿವರ ನೀಡಿದರು.

ಶುದ್ದೀಕರಣ ಘಟಕಕ್ಕೆ 1.25 ಕೋಟಿ
ನಗರ ಪಂಚಾಯತ್ ನ  ಕುಡಿಯುವ ನೀರು ಸರಬರಾಜು ಮಾಡುವ ಶುದ್ದೀಕರಣ ಘಟಕ ಹಳೆಯದಾಗಿದೆ. ಇದರ ನವೀಕರಣಕ್ಕೆ 1.25 ಕೋಟಿಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದರು. ಈಗ 50 ಹೆಚ್.ಪಿ.ಯ ಎರಡು ಪಂಪ್‍ಗಳಲ್ಲಿ ನೀರು ಪಂಪಿಂಗ್ ಮಾಡಿದರೆ ಸಮರ್ಪಕವಾಗಿ ನೀರು ಶುದ್ದೀಕರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಶುದ್ಧೀಕರಣ ಘಟಕದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪ್ರಸ್ತಾವನೆ ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

16 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

18 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

19 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

20 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago