Advertisement
ನಮ್ಮೂರ ಸುದ್ದಿ

ಸುಳ್ಯ ನೀರು ಸರಬರಾಜು ವ್ಯವಸ್ಥೆ ಸುಧಾರಣೆ : ಜಾಕ್ ವೆಲ್ ಬದಲಾವಣೆಗೆ 1.75 ಕೋಟಿ ರೂ ಯೋಜನೆ

Share

ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್ ಬದಲಾವಣೆಗೆ 1.75 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ. ನಗರೋತ್ಥಾನ ಯೋಜನೆಯಲ್ಲಿ ಬಂದ ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗುವುದು. ಕರ್ನಾಟಕ ಒಳಚರಂಡಿ ಮಂಡಳಿ ಕಾಮಗಾರಿ ನಿರ್ವಹಿಸಲಿದ್ದು ಟೆಂಡರ್ ನಡೆಯಬೇಕಾಗಿದೆ ಎಂದು ತಿಳಿಸಿದರು.

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್‍ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್‍ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆಯ ಹಿನ್ನಲೆಯಲ್ಲಿ ಮುಖ್ಯಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿವರ ನೀಡಿದರು.

ಶುದ್ದೀಕರಣ ಘಟಕಕ್ಕೆ 1.25 ಕೋಟಿ
ನಗರ ಪಂಚಾಯತ್ ನ  ಕುಡಿಯುವ ನೀರು ಸರಬರಾಜು ಮಾಡುವ ಶುದ್ದೀಕರಣ ಘಟಕ ಹಳೆಯದಾಗಿದೆ. ಇದರ ನವೀಕರಣಕ್ಕೆ 1.25 ಕೋಟಿಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದರು. ಈಗ 50 ಹೆಚ್.ಪಿ.ಯ ಎರಡು ಪಂಪ್‍ಗಳಲ್ಲಿ ನೀರು ಪಂಪಿಂಗ್ ಮಾಡಿದರೆ ಸಮರ್ಪಕವಾಗಿ ನೀರು ಶುದ್ದೀಕರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಶುದ್ಧೀಕರಣ ಘಟಕದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪ್ರಸ್ತಾವನೆ ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago