Advertisement
ನಮ್ಮೂರ ಸುದ್ದಿ

ಸುಳ್ಯ ನೀರು ಸರಬರಾಜು ವ್ಯವಸ್ಥೆ ಸುಧಾರಣೆ : ಜಾಕ್ ವೆಲ್ ಬದಲಾವಣೆಗೆ 1.75 ಕೋಟಿ ರೂ ಯೋಜನೆ

Share

ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್ ಬದಲಾವಣೆಗೆ 1.75 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ. ನಗರೋತ್ಥಾನ ಯೋಜನೆಯಲ್ಲಿ ಬಂದ ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗುವುದು. ಕರ್ನಾಟಕ ಒಳಚರಂಡಿ ಮಂಡಳಿ ಕಾಮಗಾರಿ ನಿರ್ವಹಿಸಲಿದ್ದು ಟೆಂಡರ್ ನಡೆಯಬೇಕಾಗಿದೆ ಎಂದು ತಿಳಿಸಿದರು.

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್‍ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್‍ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆಯ ಹಿನ್ನಲೆಯಲ್ಲಿ ಮುಖ್ಯಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿವರ ನೀಡಿದರು.

ಶುದ್ದೀಕರಣ ಘಟಕಕ್ಕೆ 1.25 ಕೋಟಿ
ನಗರ ಪಂಚಾಯತ್ ನ  ಕುಡಿಯುವ ನೀರು ಸರಬರಾಜು ಮಾಡುವ ಶುದ್ದೀಕರಣ ಘಟಕ ಹಳೆಯದಾಗಿದೆ. ಇದರ ನವೀಕರಣಕ್ಕೆ 1.25 ಕೋಟಿಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದರು. ಈಗ 50 ಹೆಚ್.ಪಿ.ಯ ಎರಡು ಪಂಪ್‍ಗಳಲ್ಲಿ ನೀರು ಪಂಪಿಂಗ್ ಮಾಡಿದರೆ ಸಮರ್ಪಕವಾಗಿ ನೀರು ಶುದ್ದೀಕರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಶುದ್ಧೀಕರಣ ಘಟಕದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪ್ರಸ್ತಾವನೆ ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

3 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

4 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago