Advertisement
ಕಾರ್ಯಕ್ರಮಗಳು

ಸುಳ್ಯ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು: ಪ್ರತಿಭಾ ಪುರಸ್ಕಾರ -2019

Share

ಸುಳ್ಯ: ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕರ್ತವ್ಯ ಪ್ರಜ್ಞೆಯೊಂದಿಗೆ ವಿದ್ಯಾರ್ಥಿಗಳು ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು ಎಂದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ನಾವು ಎಷ್ಟೇ ಓದಿದರೂ, ಆರ್ಥಿಕ ಮಟ್ಟ ಎಷ್ಟೇ ಇತ್ತರಕ್ಕೆ ಏರಿದರೂ ಸಂಸ್ಕಾರಯುತವಾಗಿ ಬಾಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ, ಬದುಕಿನಲ್ಲಿ ಮೇಲ್ಮುಖವಾಗಿ ನಡೆಯಲು ಇಚ್ಚಾಶಕ್ತಿ ಮತ್ತು ಕ್ರಿಯಾಶಕ್ತಿಯ ಸಮನ್ವಯತೆ ಬಹಳ ಮುಖ್ಯ. ಸೋಲು – ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ನುಡಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರತ್ನಾವತಿ ವಂದಿಸಿದರು. ಬಹುಮಾನ ವಿತರಣೆಯ ಪಟ್ಟಿಯನ್ನು ಉಪನ್ಯಾಸಕರಾದ ಕಿಶೋರ್ ಕುಮಾರ್ ಮತ್ತು ಹರೀಶ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಅವರು ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago