ಕಾರ್ಯಕ್ರಮಗಳು

ಸುಳ್ಯ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು: ಪ್ರತಿಭಾ ಪುರಸ್ಕಾರ -2019

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕರ್ತವ್ಯ ಪ್ರಜ್ಞೆಯೊಂದಿಗೆ ವಿದ್ಯಾರ್ಥಿಗಳು ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು ಎಂದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ನಾವು ಎಷ್ಟೇ ಓದಿದರೂ, ಆರ್ಥಿಕ ಮಟ್ಟ ಎಷ್ಟೇ ಇತ್ತರಕ್ಕೆ ಏರಿದರೂ ಸಂಸ್ಕಾರಯುತವಾಗಿ ಬಾಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ, ಬದುಕಿನಲ್ಲಿ ಮೇಲ್ಮುಖವಾಗಿ ನಡೆಯಲು ಇಚ್ಚಾಶಕ್ತಿ ಮತ್ತು ಕ್ರಿಯಾಶಕ್ತಿಯ ಸಮನ್ವಯತೆ ಬಹಳ ಮುಖ್ಯ. ಸೋಲು – ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ನುಡಿದರು.

Advertisement

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರತ್ನಾವತಿ ವಂದಿಸಿದರು. ಬಹುಮಾನ ವಿತರಣೆಯ ಪಟ್ಟಿಯನ್ನು ಉಪನ್ಯಾಸಕರಾದ ಕಿಶೋರ್ ಕುಮಾರ್ ಮತ್ತು ಹರೀಶ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಅವರು ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

13 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

13 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

13 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

14 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

21 hours ago