ಸುಳ್ಯ: ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕರ್ತವ್ಯ ಪ್ರಜ್ಞೆಯೊಂದಿಗೆ ವಿದ್ಯಾರ್ಥಿಗಳು ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು ಎಂದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ನಾವು ಎಷ್ಟೇ ಓದಿದರೂ, ಆರ್ಥಿಕ ಮಟ್ಟ ಎಷ್ಟೇ ಇತ್ತರಕ್ಕೆ ಏರಿದರೂ ಸಂಸ್ಕಾರಯುತವಾಗಿ ಬಾಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ, ಬದುಕಿನಲ್ಲಿ ಮೇಲ್ಮುಖವಾಗಿ ನಡೆಯಲು ಇಚ್ಚಾಶಕ್ತಿ ಮತ್ತು ಕ್ರಿಯಾಶಕ್ತಿಯ ಸಮನ್ವಯತೆ ಬಹಳ ಮುಖ್ಯ. ಸೋಲು – ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ನುಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರತ್ನಾವತಿ ವಂದಿಸಿದರು. ಬಹುಮಾನ ವಿತರಣೆಯ ಪಟ್ಟಿಯನ್ನು ಉಪನ್ಯಾಸಕರಾದ ಕಿಶೋರ್ ಕುಮಾರ್ ಮತ್ತು ಹರೀಶ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಅವರು ನಿರ್ವಹಿಸಿದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…