Advertisement
ಕಾರ್ಯಕ್ರಮಗಳು

ಸುಳ್ಯ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು: ಪ್ರತಿಭಾ ಪುರಸ್ಕಾರ -2019

Share

ಸುಳ್ಯ: ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕರ್ತವ್ಯ ಪ್ರಜ್ಞೆಯೊಂದಿಗೆ ವಿದ್ಯಾರ್ಥಿಗಳು ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು ಎಂದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ನಾವು ಎಷ್ಟೇ ಓದಿದರೂ, ಆರ್ಥಿಕ ಮಟ್ಟ ಎಷ್ಟೇ ಇತ್ತರಕ್ಕೆ ಏರಿದರೂ ಸಂಸ್ಕಾರಯುತವಾಗಿ ಬಾಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ, ಬದುಕಿನಲ್ಲಿ ಮೇಲ್ಮುಖವಾಗಿ ನಡೆಯಲು ಇಚ್ಚಾಶಕ್ತಿ ಮತ್ತು ಕ್ರಿಯಾಶಕ್ತಿಯ ಸಮನ್ವಯತೆ ಬಹಳ ಮುಖ್ಯ. ಸೋಲು – ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ನುಡಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರತ್ನಾವತಿ ವಂದಿಸಿದರು. ಬಹುಮಾನ ವಿತರಣೆಯ ಪಟ್ಟಿಯನ್ನು ಉಪನ್ಯಾಸಕರಾದ ಕಿಶೋರ್ ಕುಮಾರ್ ಮತ್ತು ಹರೀಶ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಅವರು ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago