ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…