ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…