ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…