ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…