ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…