ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…